Categories
ರಾಜ್ಯೋತ್ಸವ 2014 ರಾಜ್ಯೋತ್ಸವ ಪ್ರಶಸ್ತಿ ಸಾಹಿತ್ಯ

ಮೂಡ್ನಾಕೂಡು ಚಿನ್ನಸ್ವಾಮಿ

ಮೂಡ್ನಾಕೂಡು ಚಿನ್ನಸ್ವಾಮಿ ಅವರು ಕನ್ನಡ ಸಾಹಿತ್ಯ ಲೋಕದಲ್ಲಿ ನಡೆದ ದಲಿತ ಸಾಹಿತ್ಯ ಚಳುವಳಿಯ ಮೊದಲ ತಲೆಮಾರಿನ ಬರಹಗಾರರು, ದಲಿತ-ಬಂಡಾಯ ಕಾವ್ಯ ಮಾರ್ಗದಲ್ಲಿ ನಡೆದು ಬಂದ ಇವರು ಕವಿತೆ, ನಾಟಕ, ಕಥೆ ಹೀಗೆ ಎಲ್ಲಾ ಪ್ರಕಾರಗಳಲ್ಲಿಯೂ ಹಾದು ಬಂದಿದ್ದಾರೆ. ಕರ್ನಾಟಕ ಸಾರಿಗೆ ಸಂಸ್ಥೆಯ ಅಧಿಕಾರಿಯಾಗಿ ಸೇವೆ ಸಲ್ಲಿಸಿ ಅಲ್ಲಿಯೂ ಕನ್ನಡದ ಕಂಪನ್ನು ಪಸರಿಸಿದ್ದಾರೆ.

ಮೂಡ್ನಾಕೂಡು ಚಿನ್ನಸ್ವಾಮಿ ಅವರು ತಮ್ಮ ಕೃತಿ ಮತ್ತು ಚಿಂತನೆಗಳ ಮೂಲಕ ಸಮಾಜದ ಶೋಷಿತ ಮತ್ತು ದಮನಿತ ವರ್ಗಗಳ ಅಭಿಮಾನವನ್ನು ಜಾಗೃತಗೊಳಿಸಿದವರು. ಇವರ ಅನೇಕ ಕವಿತೆಗಳು ಬೇರೆ ಬೇರೆ ಭಾಷೆಗಳಿಗೂ ಅನುವಾದಗೊಂಡಿದ್ದು, ಅನೇಕ ಕೃತಿಗಳನ್ನು ಇವರ ಸಂಪಾದನೆ ಮಾಡಿದ್ದಾರೆ. ಕನ್ನಡದಿಂದ ಸ್ಪ್ಯಾನಿಷ್ ಭಾಷೆಗೆ ಗ್ರಂಥ ರೂಪದಲ್ಲಿ ಪ್ರಕಟಗೊಂಡ ಮೊದಲ ಕೃತಿ ಕೂಡ ಇವರದೇ. ಇವರನ್ನು ಕರ್ನಾಟಕ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿಯೂ ಸೇರಿದಂತೆ ಅನೇಕ ಪ್ರಶಸ್ತಿ ಗೌರವಗಳು ಅರಸಿ ಬಂದಿವೆ.