Categories
ಕ್ರೀಡೆ ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ

ವಿ.ಆರ್.ರಘುನಾಥ್

ಭಾರತ ಹಾಕಿ ತಂಡದ ಪ್ರಮುಖ ಆಟಗಾರರಾದ ವಿ.ಆರ್.ರಘುನಾಥ್ ರಾಷ್ಟ್ರಮಟ್ಟದಲ್ಲಿ ಸಬ್ ಜ್ಯೂನಿಯರ್ ಭಾರತೀಯ ತಂಡದ ಆಟಗಾರರಾಗಿ ಪಾದಾರ್ಪಣೆ ಮಾಡಿದರು.

೨೦೦೫ರಲ್ಲಿ ಪಾಕಿಸ್ತಾನದ ವಿರುದ್ಧ ನಡೆದ ಪಂದ್ಯದಲ್ಲಿ ಭಾರತ ಸೀನಿಯರ್ ಹಾಕಿ ಪಂದ್ಯದಲ್ಲಿ ಸ್ಥಾನ ಪಡೆದ ರಘುನಾಥ, ನಂತರ ಹಲವು ಅಂತರರಾಷ್ಟ್ರೀಯ ಹಾಕಿ ಪಂದ್ಯಾವಳಿಗಳಲ್ಲಿ ಭಾರತ ತಂಡದ ಪ್ರಮುಖ ಆಟಗಾರರಾಗಿ ಪಾಲುಗೊಂಡಿದ್ದಾರೆ.

೨೦೦೭ರಲ್ಲಿ ಸುಲ್ತಾನ್ ಅಜ್ಞಾನ್ ಷಾ ಕಪ್ ಗೆದ್ದ ಭಾರತ ತಂಡದ ಪ್ರಮುಖ ಆಟಗಾರರಾಗಿದ್ದ ಇವರು ರಾಷ್ಟ್ರೀಯ ಲೀಗ್ ಪಂದ್ಯಾವಳಿಗಳಲ್ಲಿ ಉತ್ತರ ಪ್ರದೇಶದ ನಾಯಕರಾಗಿದ್ದು, ಒಂದೇ ಸೀಸನ್ನಿನಲ್ಲಿ ಅತಿ ಹೆಚ್ಚು ಗೋಲು ಗಳಿಸಿದ ದಾಖಲೆಯನ್ನು ಎರಡು ಬಾರಿ ಬರೆದಿದ್ದಾರೆ.