Categories
ರಾಜ್ಯೋತ್ಸವ 2020 ರಾಜ್ಯೋತ್ಸವ ಪ್ರಶಸ್ತಿ ಸಂಕೀರ್ಣ

ವಿ. ಲಕ್ಷ್ಮಿನಾರಾಯಣ

ಸಕ್ಕರೆ ನಾಡಿನ ಅಕ್ಕರೆಯ ವ್ಯಕ್ತಿತ್ವದ ವಿ. ಲಕ್ಷ್ಮಿನಾರಾಯಣ ಮೌನಸಾಧಕರು. ಸಾಹಿತ್ಯ, ಸಾಂಸ್ಕೃತಿಕ, ಸಾಮಾಜಿಕ ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಅವರದ್ದು ಅಚ್ಚಳಿಯದ ಹೆಜ್ಜೆಗುರುತು.
ಮಂಡ್ಯ ಜಿಲ್ಲೆ ನಾಗಮಂಗಲ ತಾಲ್ಲೂಕಿನ ಹರದನಹಳ್ಳಿ ಹುಟ್ಟೂರು. ಸಿವಿಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೋಮಾ, ವಿದ್ಯಾರ್ಥಿ ದೆಸೆಯಲ್ಲೇ ನಾಯಕತ್ವದ ಗುಣ, ೧೯೬೮ರಲ್ಲೇ ವಸತಿ ನಿರ್ಮಾಣದಲ್ಲಿ ತೊಡಗಿಕೊಂಡ ಉದ್ಯಮಿ, ಗುಣಮಟ್ಟದ ಕಾಮಗಾರಿ-ರಚನಾತ್ಮಕ ಕಾರ್ಯಗಳಿಗೆ ಹೆಸರುವಾಸಿ. ೧೯೯೦ರಲ್ಲಿ ‘ನಿರ್ಮಾಣ್ ಶೆಲ್ಟರ್’ ಸಂಸ್ಥೆ ಸ್ಥಾಪಿಸಿ ಬಡ-ಮಧ್ಯಮ ವರ್ಗದ ಜನರಿಗೆ ಸುಲಭ ಬೆಲೆಯಲ್ಲಿ ನಿವೇಶನ-ಮನೆಗಳ ನಿರ್ಮಾಣ. ಆರು ಸುಸಜ್ಜಿತ ಬಡಾವಣೆಗಳ ನಿರ್ಮಾತೃ, ಸಾಹಿತ್ಯ, ಸಮಾಜಸೇವೆ ಲಕ್ಷ್ಮಿನಾರಾಯಣರ ವ್ಯಕ್ತಿತ್ವದ ಹೆಗ್ಗುರುತು. ಆಯುರ್ವೇದ ಆಸ್ಪತ್ರೆ, ಪುರಂದರ ಪ್ರತಿಷ್ಠಾನ, ಅ.ನ.ಕೃ ಪ್ರತಿಷ್ಠಾನ, ಹಿರಿಯ ನಾಗರಿಕರ ವಸತಿ ತಾಣ ಪ್ರಬುದ್ಧಾಲಯ, ‘ವಾತ್ಸಲ್ಯ’, ದೇವಸ್ಥಾನಗಳ ನಿರ್ಮಾಣ, ಧ್ಯಾನಮಂದಿರ ಬಡಮಕ್ಕಳಿಗೆ ಮಧ್ಯಾಹ್ನದೂಟದ ವ್ಯವಸ್ಥೆ, ಸುಸಜ್ಜಿತ ಅಡುಗೆಕೋಣೆ, ಭೋಜನಾ ಶಾಲೆ, ಕಲಾಭವನಗಳ ನಿರ್ಮಾಣದಂತಹ ಹತ್ತಾರು ಸೇವಾಕಾರ್ಯಗಳಲ್ಲಿ ತೊಡಗಿರುವ ದೀನಬಂಧು. ಆರ್ಯಭಟ ಪ್ರಶಸ್ತಿ, ಡಾ.ಅ.ನ.ಕೃ ಸಾರ್ವಭೌಮ, ರಾಜ್ಯ ಪ್ರಶಸ್ತಿಯಿಂದ ಭೂಷಿತವಾದ ಸಾರ್ಥಕ ಜೀವನ.