Categories
ರಾಜ್ಯೋತ್ಸವ 2014 ರಾಜ್ಯೋತ್ಸವ ಪ್ರಶಸ್ತಿ ಸಿನಿಮಾ

ವೈಜನಾಥ ಬಿರಾದಾರ

ರಂಗಭೂಮಿಯ ಮೂಲಕ ಬಣ್ಣದ ಜಗತ್ತಿಗೆ ಕಾಲಿಟ್ಟ ವೈಜನಾಥ ಬಿರಾದಾರ್ ಕನ್ನಡದ ಹಿರಿಯ ಪೋಷಕ ನಟರಲ್ಲೊಬ್ಬರು. ಹಾಸ್ಯ ಪಾತ್ರಗಳಿಂದ ಕನ್ನಡ ಚಿತ್ರಗಳಲ್ಲಿ ಗುರುತಿಸಿಕೊಂಡಿರುವ ವೈಜನಾಥ ಬಿರಾದಾರ್ ಅವರು ನಾಲ್ಕು ದಶಕಗಳಿಂದ ನೂರಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದಾರೆ.

ದೊರೆಯುವ ಯಾವುದೇ ಪಾತ್ರವಾದರೂ ಅದಕ್ಕೆ ಜೀವ ತುಂಬಿ ಅಭಿನಯಿಸುವ ವೈಜನಾಥ ಬಿರಾದಾರ್ ಅವರು ಅಂತರರಾಷ್ಟ್ರೀಯ ಖ್ಯಾತಿ ಪಡೆದ ಚಲನಚಿತ್ರ ನಿದೇಶಕ ಗಿರೀಶ ಕಾಸರವಳ್ಳಿ ಅವರ ಕನಸೆಂಬ ಕುದುರೆಯನೇರಿ ಚಿತ್ರದಲ್ಲಿ ಮನೋಜ್ಞ ಅಭಿನಯದಿಂದ ರಾಷ್ಟ್ರಮಟ್ಟದಲ್ಲೂ ಪ್ರೇಕ್ಷಕರ ಗಮನ ಸೆಳೆದರು. ಹೀಗಾಗಿ ಅವರ ಹೆಸರು ರಾಷ್ಟ್ರ ಪ್ರಶಸ್ತಿಯ ವೇಳೆ ಚರ್ಚೆಯಾಯಿತು. ಅತ್ಯಂತ ನೈಜ ಅಭಿನಯದಿಂದ ಪ್ರೇಕ್ಷಕರ ಮನ ಗೆದ್ದಿರುವ ವೈಜನಾಥ ಬಿರಾದಾರ್ ರಂಗಭೂಮಿ ಹಾಗೂ ಚಲನಚಿತ್ರ ಕ್ಷೇತ್ರಗಳಲ್ಲಿ ನಿರಂತರವಾಗಿ ಅಭಿನಯಿಸುತ್ತಿರುವ ಕಲಾವಿದರು.