Categories
ರಾಜ್ಯೋತ್ಸವ 2014 ರಾಜ್ಯೋತ್ಸವ ಪ್ರಶಸ್ತಿ ಲಲಿತಕಲೆ ಶಿಲ್ಪಕಲೆ

ವೈ. ಯಂಕಪ್ಪ

ಕರ್ನಾಟಕದಲ್ಲಿ ದೇವಾಲಯಗಳಿಗೆ ಗೋಪುರಗಳನ್ನು ನಿರ್ಮಿಸುವಲ್ಲಿ ನೈಪುಣ್ಯತೆ ಹೊಂದಿರುವ ವೈ, ಯಂಕಪ್ಪ ಅವರು ವಿದ್ಯಾಭ್ಯಾಸದಲ್ಲಿ ಹೆಚ್ಚು ದಿನ ಮುಂದುವರೆಯದಿದ್ದರೂ ಶಿಲ್ಪಕಲೆಯಲ್ಲಿ ವಿಶೇಷವಾಗಿ ಗೋಪುರ ಹಾಗೂ ಸಭಾಮಂಟಪಗಳನ್ನು ನಿರ್ಮಿಸುವಲ್ಲಿ ತಮ್ಮದೇ ಆದ ಮಾರ್ಗವನ್ನು ಕಂಡುಕೊಂಡವರು.

ನಮ್ಮ ನಾಡಿನ ಶ್ರೇಷ್ಠ ವಾಸ್ತು ಶಿಲ್ಪ ಶೈಲಿಯನ್ನು ವಿಶ್ವನಾಥ ನಾಯ್ಡು ಅವರಿಂದ ಕಲಿತು ವಾಸ್ತು ಶಿಲ್ಪವನ್ನು ಬದುಕಿಗಾಗಿ ಆರಿಸಿಕೊಂಡು ನಡೆದದ್ದು ಗ್ರಾಮೀಣ ಪ್ರದೇಶಕ್ಕೆ ದಾವಣಗೆರೆಯವರಾದ ಯಂಕಪ್ಪ ಸುತ್ತಮುತ್ತಲ ಅನೇಕ ಗ್ರಾಮೀಣ ಪ್ರದೇಶಗಳಲ್ಲಿ ಅಸಂಖ್ಯಾತ ಗುಡಿ ಗೋಪುರಗಳನ್ನು ಸಭಾ ಮಂಟಪಗಳನ್ನು ನಿರ್ಮಿಸಿಕೊಟ್ಟಿದ್ದಾರೆ. ಮೂರು ದಶಕಗಳಿಂದ ಅನೇಕ ಗೋಪುರ ಹಾಗೂ ಸಭಾಮಂಟಪಗಳನ್ನು ವಿಭಿನ್ನ ಶೈಲಿಯಲ್ಲಿ ನಿರ್ಮಾಣ ಮಾಡಿರುವ ಶಿಲ್ಪಿ ಯಂಕಪ್ಪ ಅವರು ಒಂದೊಂದು ದೇವಾಲಯವನ್ನೂ ವಿಭಿನ್ನ ರೀತಿಯಲ್ಲಿ ನಿರ್ಮಾಣ ಮಾಡುವಲ್ಲಿ ನಿಪುಣರು. ಶಿಲ್ಪಕಲಾ ಅಕಾಡೆಮಿಯ ಗೌರವವನ್ನೂ ಪಡೆದಿರುವ ಯಂಕಪ್ಪನವರು ಅನೇಕ ಪ್ರಶಸ್ತಿ – ಪುರಸ್ಕಾರಗಳಿಗೆ ಪಾತ್ರರಾಗಿದ್ದಾರೆ.