Categories
ರಾಜ್ಯೋತ್ಸವ 2016 ರಾಜ್ಯೋತ್ಸವ ಪ್ರಶಸ್ತಿ ಸಾಹಿತ್ಯ

ಶಾಮಸುಂದರ

ಮೈಸೂರು ವಿಶ್ವವಿದ್ಯಾನಿಲಯದ ಪ್ರತಿಷ್ಠಿತ ಕನ್ನಡ ವಿಶ್ವಕೋಶದ ಮಾನವಿಕ ಸಂಪಾದಕರಾಗಿ ನೇಮಕಗೊಂಡ ಬಿ.ಶಾಮಸುಂದರ್ ಅವರು ವಿಶ್ವಕೋಶ ವಿಭಾಗದ ಮುಖ್ಯಸ್ಥರಾಗಿ, ಕಾರ್ಯನಿರ್ವಾಹಕ ಸಂಪಾದಕರಾಗಿ ಕೆಲಸ ಮಾಡಿದ್ದಾರೆ.
ಸಾಹಿತ್ಯ ಕ್ಷೇತ್ರದಲ್ಲಿ ಕಾದಂಬರಿ, ಕತೆ, ಪ್ರಬಂಧಗಳನ್ನು ರಚಿಸಿರುವ ಶಾಮಸುಂದ ಅವರು ಬಾನುಲಿಯಲ್ಲಿಯೂ ಹಲವಾರು ಸಾಹಿತ್ಯಕ ಭಾಷಣಗಳನ್ನು ಮಾಡಿದ್ದಾರೆ. ಮೈಸೂರು ವಿವಿ, ಕನ್ನಡ ಸಾಹಿತ್ಯ ಪರಿಷತ್ತು, ಇವರ ಪುಸ್ತಕಗಳನ್ನು ಹೊರತಂದಿದ್ದು, ಇವರು ಬರೆದ ನಾಟಕಗಳು ಹಾಗೂ ಲೇಖನಗಳು ವಿವಿಧ ಪಠ್ಯಪುಸ್ತಕಗಳಲ್ಲಿ ಮುದ್ರಣಗೊಂಡಿವೆ.
ಬಿ.ಶಾಮಸುಂದರ ಅವರ ಸಾಹಿತ್ಯ ಸಾಧನೆಯ ಬಗ್ಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ಸಹ ನಡೆದಿರುವುದು ಇವರ ಹೆಗ್ಗಳಿಕೆ.