Categories
ರಂಗಭೂಮಿ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀಮತಿ ಸಾವಿತ್ರಿ ಗೌಡ

ಮೂಲತ: ಗದಗ ಜಿಲ್ಲೆಯವರಾದ ರಂಗಭೂಮಿ ಕಲಾವಿದೆ ಶ್ರೀಮತಿ ಸಾವಿತ್ರಿಗೌಡರ್ ಅಸಾಧಾರಣ ಪ್ರತಿಭೆ. ವೃತ್ತಿ ರಂಗಭೂಮಿಯ ನಾಟಕಗಳಲ್ಲಿ ಪಾತ್ರವಹಿಸುತ್ತ ೫೦ ವರ್ಷಗಳ ನಿರಂತರ ಸೇವೆಯನ್ನು ಮಾಡಿದ್ದಾರೆ. ಶ್ರೀ ಸಿದ್ದಲಿಂಗೇಶ್ವರ ನಾಟ್ಯ ಸಂಘ, ಶ್ರೀಶೈಲ ಮಲ್ಲಿಕಾರ್ಜುನ ನಾಟ್ಯ ಸಂಘ, ಓಬಳೇಶ್ವರ ನಾಟಕ ಕಂಪನಿ, ಕೆ.ಬಿ.ಆರ್ ನಾಟಕ ಕಂಪನಿ, ಮುಂತಾದ ವೃತ್ತಿ ರಂಗಭೂಮಿಯ ಹಲವು ನಾಟಕ ಕಂಪನಿಗಳಲ್ಲಿ ಸೇವೆ ಸಲ್ಲಿಸಿ ಹೆಸರಾಗಿದ್ದಾರೆ. ಅವರ ಅಭಿನಯ ಪ್ರತಿಭೆಯನ್ನು ಗುರುತಿಸಿ, ಹಲವು ಸಂಘ ಸಂಸ್ಥೆಗಳು ಪ್ರಶಸ್ತಿ ಪುರಸ್ಕಾರಗಳನ್ನಿತ್ತು ಗೌರವಿಸಿವೆ.