Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಂಘ-ಸಂಸ್ಥೆ

ಶ್ರೀರಾಮಕೃಷ್ಣಾಶ್ರಮ ಮಂಗಳೂರು

೧೯೪೭ರಲ್ಲಿ ಆರಂಭವಾದ ಮಂಗಳೂರಿನ ಶ್ರೀ ರಾಮಕೃಷ್ಣಾಶ್ರಮ, ಸುಮಾರು ಆರು ದಶಕಗಳಿಂದ ಸಮಾಜದಲ್ಲಿ ಧರ್ಮ ಮತ್ತು ಆಧ್ಯಾತ್ಮದ ಬೀಜವನ್ನು ಬಿತ್ತುವಲ್ಲಿ ಶ್ರಮಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಅಕ್ಷರ, ಆಶ್ರಯ ಮತ್ತು ಅನ್ನ ನೀಡುವ ಉದ್ದೇಶದಿಂದ ಆರಂಭಗೊಂಡ ಈ ಆಶ್ರಮ, ಧ್ಯಾನ, ಭಜನೆ, ಪ್ರಾರ್ಥನೆಗಳ ಮೂಲಕ ಶಾಂತಿ ನೆಮ್ಮದಿ ನೀಡುವಲ್ಲಿ ಯಶಸ್ವಿಯಾಗಿದೆ. ಯೋಗ, ಶಿಕ್ಷಣಗಳ ಮೂಲಕ ಸಮಾಜದ ಹಾಗೂ ಜನರ ಮಾನಸಿಕ ಸ್ವಾಸ್ಥ ಕಾಪಾಡುತ್ತಿದೆ.