Categories
ಕೃಷಿ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ. ಎಸ್. ಶಂಕರಪ್ಪ ಅಮ್ಮಿನಘಟ್ಟ

ಸಾವಯವ ಕೃಷಿ ಕ್ಷೇತ್ರದಲ್ಲಿ ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಶ್ರೀ ಎಸ್. ಶಂಕರಪ್ಪ ಅಮ್ಮಿನಘಟ್ಟ ಅವರದು ವಿಶಿಷ್ಟ ಸಾಧನೆ. ಸಾವಯವ ಕೃಷಿಯನ್ನು ಪ್ರೇರೇಪಿಸಲು ಶ್ರಮಿಸುತ್ತಿರುವ ಇವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಸಾವಯವ ಕೃಷಿ ಪ್ರೇರಕರಾಗಿ ದುಡಿಯುತ್ತಿದ್ದಾರೆ.

ತಮ್ಮ ಎಂಟು ಎಕರೆ ಜಮೀನಿನಲ್ಲಿ ತೆಂಗು, ಬಾಳೆ, ಅಡಿಕೆ, ಹಲಸು, ಮಾವು, ಮೆಣಸು, ಸಪೋಟ ಹಾಗೂ ನಾನಾ ತರದ ಗಿಡಗಳನ್ನು ಬೆಳೆಸಿದ್ದಾರೆ. ಇದಲ್ಲದೇ ಮಳೆ ನೀರು ಸಂಗ್ರಹಣೆಯಲ್ಲಿ ಕೂಡ ಇವರ ಕಾಳಜಿ ಅಪಾರ, ನಿಸರ್ಗ ಸಾವಯವ ಕೃಷಿ ಪರಿವಾರದಲ್ಲಿ ನಿರ್ದೇಶಕರಾಗಿ ಹಾಗೂ ತುಮಕೂರು ಜಿಲ್ಲಾ ಸಂಚಾಲಕರಾಗಿ ಸಕ್ರಿಯವಾಗಿದ್ದಾರೆ. ಸುಭಿಕ್ಷ ಆರ್ಗಾನಿಕ್ ಫಾರ್ಮಸ್್ರ ಮಲ್ಟಿ ಸ್ಟೇಟ್ಸ್ ಕೋ ಆಪರೇಟಿವ್ ಸೊಸೈಟಿ ಅಮಿಟೆಡ್ ಸಂಸ್ಥೆಯ ನಿರ್ದೇಶಕರಾಗಿಯೂ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ.