Categories
ಕ್ರೀಡೆ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಗೋಪಿನಾಥ್ ಕೆ

ಪ್ಯಾರಾ ಓಲಂಪಿಕ್ ಕ್ರೀಡೆಯಲ್ಲಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಾಧನೆ ಮಾಡಿರುವ ಬೆಂಗಳೂರಿನ ಕೆ.ಗೋಪಿನಾಥ್ ವಿಕಲಚೇತನ ಕ್ರೀಡಾಪಟು.

೨೦೦೩ ರಿಂದ ಭಾರತವನ್ನು ಪ್ರತಿನಿಧಿಸುತ್ತಿರುವ ಶ್ರೀ ಕೆ.ಗೋಪಿನಾಥ್ ಪ್ಯಾರಾ ಬ್ಯಾಂಡ್ಮಿಂಟನ್, ಡಿಸ್ಕ್ ಪ್ರೋ ಹಾಗೂ ಶಾಟ್ ಪುಟ್ ಆಡಿ ಚಿನ್ನದ ಪದಕ ಹಾಗೂ ಕಂಚಿನ ಪದಕಗಳನ್ನು ಪಡೆದಿದ್ದಾರೆ. ಹಾಂಕಾಂಗ್, ಚೀನಾ, ಮಲೇಶಿಯಾ, ಇಸ್ರೇಲ್, ಜರ್ಮನಿ, ದಕ್ಷಿಣ ಆಫ್ರಿಕಾ ಹಾಗೂ ಶ್ರೀಲಂಕಾಗಳಲ್ಲಿ ನಡೆದ ಪ್ಯಾರಾ ಓಲಂಪಿಕ್ ಕ್ರೀಡೆಗಳಲ್ಲಿ ಭಾಗವಹಿಸಿ ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಇವರ ಕ್ರೀಡಾಸಾಧನೆಯನ್ನು ಪರಿಗಣಿಸಿ ೨೦೧೧ ರಲ್ಲಿ ಕೆಂಪೇಗೌಡ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕ್ರೀಡಾ ಸಂಸ್ಥೆಯಲ್ಲಿ ಪ್ರಸ್ತುತ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿರುವ ಇವರು ಕರ್ನಾಟಕ ರಾಜ್ಯ ವಿಕಲ ಚೇತನ ಒಕ್ಕೂಟದ ಜಂಟಿ ಕಾರ್ಯದರ್ಶಿಯೂ ಆಗಿದ್ದಾರೆ.