Categories
ಪತ್ರಿಕೋದ್ಯಮ ರಾಜ್ಯೋತ್ಸವ 2008 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಚಂದ್ರಕಾಂತ್

ಶಿವಮೊಗ್ಗ ಜಿಲ್ಲೆಯ ಸ್ಥಳೀಯ ಪತ್ರಿಕೋದ್ಯಮಕ್ಕೆ ಹೊಸ ದಿಕ್ಕು ಮೂಡಿಸಿದ ಕೀರ್ತಿ ನಾವಿಕ ದಿನ ಪತ್ರಿಕೆಯ ಸಂಪಾದಕ ಎಸ್.ಚಂದ್ರಕಾಂತ್ ಅವರದು. ೧೯೫೧ರಲ್ಲಿ ಶಿವಮೊಗ್ಗದಲ್ಲಿ ಜನನ. ೧೯೭೭ರಲ್ಲಿ ಪತ್ರಿಕೋದ್ಯಮ ಪ್ರವೇಶ. ಇಲ್ಲಿವರೆಗೂ ವರ್ಷಗಳ ೩೧ ಕಾಲ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ.
ಶಿವಮೊಗ್ಗ ಜಿಲ್ಲೆಯ ಶರಾವತಿ, ಎಚ್ಚರಿಕೆ, ಮಲೆನಾಡ ವಾಣಿ ಪತ್ರಿಕೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ. ಜಿಲ್ಲೆಯ ಸಾಂಸ್ಕೃತಿಕ, ರಾಜಕೀಯ, ಸಾಹಿತ್ಯಕ ಕ್ಷೇತ್ರಗಳಿಗೆ ಪತ್ರಿಕೆಯ ಮೂಲಕ ಅನನ್ಯ ಸೇವೆ.
ಶಿವಮೊಗ್ಗ ಜಿಲ್ಲೆಯ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಜಿಲ್ಲೆಯ ಪ್ರೆಸ್‌ಕ್ಲಬ್ ಸ್ಥಾಪಕ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಅವರು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ನಿರ್ದೇಶಕರಾಗಿ ಹಾಲಿ ಸೇವೆ.
ಪರೋಪಕಾರಿ ಸಂಘ, ಪ್ರತಿಭಾ ರಂಗ, ಮಲೆನಾಡು ಕನ್ನಡ ಸಂಘ ಮೊದಲಾದ ಸಂಘಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಪ್ರಮುಖ ಬೆಳವಣಿಗೆಗಳಿಗೆ ಸಾಕ್ಷಿಯಾಗಿ, ಜನಾಭಿಪ್ರಾಯವನ್ನು ಮೂಡಿಸುತ್ತಿರುವ ನಾವಿಕ ದಿನಪತ್ರಿಕೆಯ ಸಂಪಾದಕರಾಗಿ ಅನನ್ಯ ಕೊಡುಗೆ ನೀಡಿದವರು ಎಸ್.ಚಂದ್ರಕಾಂತ್.