Categories
ರಾಜ್ಯೋತ್ಸವ 2018 ರಾಜ್ಯೋತ್ಸವ ಪ್ರಶಸ್ತಿ ಸಾಹಿತ್ಯ

ಶ್ರೀ ಚಂದ್ರಶೇಖರ ತಾಳ್ಯ

ಕನ್ನಡದ ಸೃಜನಶೀಲ ಸಾಹಿತಿಗಳಲ್ಲಿ ಚಂದ್ರಶೇಖರ ತಾಳ್ಯ ಸಹ ಒಬ್ಬರು. ಕಾವ್ಯ, ಗದ್ಯ, ನಾಟಕ, ಅನುವಾದ ಸಾಹಿತ್ಯ ಸೇರಿದಂತೆ ಹಲವು ಸಾಹಿತ್ಯಕ ಪ್ರಕಾರಗಳಲ್ಲಿ ಕೃಷಿ ಮಾಡಿದ ಸಾಧಕರು.
ನನ್ನ ಕಣ್ಣಗಲಕ್ಕೆ, ಸಿಂಧೂ ನದಿಯ ದಂಡೆಯ ಮೇಲೆ, ಎಲ್ಲಿ ನವಿಲು ಹೇಳಿರೇ, ಸುಡುವ ಭೂಮಿ, ಕಾವಳದ ಸಂಜೆಯಲ್ಲಿ, ಮೌನಮಾತಿನ ಸದ್ದು ತಾಳ್ಯರ ಕವನಸಂಕಲನಗಳು. ಪ್ರಭು ಅಲ್ಲಮ, ನೆಲದ ಹುಡುಕಿ ಗದ್ಯ, ಅಲ್ಲಮ ನಾಟಕ, ರಾಮಕೃಷ್ಣ ಮತ್ತು ಅವರ ಕಾಲ, ಗಾಂಧಿ ಹೋದರು: ನಮಗೆ ದಿಕ್ಕು ತೋರುವವರು ಯಾರು ಮತ್ತು ಭಾರತೀಯ ತತ್ವಶಾಸ್ತ್ರ ಇವರ ಸಾಹಿತ್ಯಕ ಕೊಡುಗೆಗಳು. ನವೋತ್ತರ ಸಾಹಿತ್ಯದ ಕಾವ್ಯ ಕಟ್ಟೋಣಕ್ಕೆ ಮಾದರಿಯಂತಹ ಕಾವ್ಯ ರಚನೆ ತಾಳ್ಯರ ವಿಶೇಷತೆ, ನಡೆ-ನುಡಿ ಎರಡರಲ್ಲೂ ಏಕಮಯತೆ, ೧೪ ಕೃತಿಗಳನ್ನು ರಚಿಸಿರುವ ಅವರು ಆರ್ಯಭಟ ಪ್ರಶಸ್ತಿ, ಜಿ.ಎಸ್.ಎಸ್. ಪ್ರಶಸ್ತಿ, ಡಿ.ಎಸ್.ಮ್ಯಾಕ್ಸ್ ಸಾಹಿತ್ಯಶ್ರೀ ಗೌರವ ಮುಂತಾದ ಪ್ರಶಸ್ತಿಗಳಿಗೆ ಭಾಜನರು.