Categories
ಪತ್ರಿಕೋದ್ಯಮ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಚಂದ್ರಶೇಖರ ಪಾಲೆತ್ತಾಡಿ

ಪುತ್ತೂರು ತಾಲ್ಲೂಕಿನ ಬಜೆತ್ತೂರು ಗ್ರಾಮದ ಶ್ರೀ ಚಂದ್ರಶೇಖರ ಪಾಲೆತ್ತಾಡಿ ಹೆಸರಾಂತ ಪತ್ರಕರ್ತರು, ಹೊಸದಿಗಂತ, ಮಂಗಳೂರು ಮಿತ್ರ, ಕರ್ನಾಟಕ ಮಲ್ಲ, ಉದಯದೀಪ, ಮುಂತಾದ ಪತ್ರಿಕೆಗಳಲ್ಲಿ ಅಂಕಣಗಳನ್ನು ಹಾಗೂ ವರದಿಗಳನ್ನು ಬರೆದು ಓದುಗರಿಗೆ ಹತ್ತಿರವಾದವರು. ಮುಂಬೈನಲ್ಲಿ ನೆಲೆಸಿರುವ ಇವರು, ಮುಂಬೈನಿಂದ ಪ್ರಕಟವಾಗುವ ಏಕೈಕ ಕನ್ನಡ ಪತ್ರಿಕೆ ‘ಕರ್ನಾಟಕ ಮಲ್ಲ’ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಕನ್ನಡಿಗರ ಧ್ವನಿಯನ್ನು ಒಗ್ಗೂಡಿಸುವ ಮಹಾನ್ ಕಾರ್ಯವನ್ನು ಮಾಡುತ್ತಿದ್ದಾರೆ. ಇವರಿಗೆ ರಾಣಿ ಅಬ್ಬಕ್ಕ ಪ್ರಶಸ್ತಿ, ತುಳುವ ಸಿರಿ ಪ್ರಶಸ್ತಿ, ಮುಂತಾದ ಲೆಕ್ಕವಿಲ್ಲದಷ್ಟು ಪ್ರಶಸ್ತಿಗಳು ಸಂದಿವೆ.