Categories
ರಾಜ್ಯೋತ್ಸವ 2020 ರಾಜ್ಯೋತ್ಸವ ಪ್ರಶಸ್ತಿ ಸಂಘ-ಸಂಸ್ಥೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ (ರಿ), ಧರ್ಮಸ್ಥಳ

ದೇವಸ್ಥಾನಗಳ ಜೀರ್ಣೋದ್ಧಾರದಲ್ಲಿ ನಿರತ ಮೈಲಿಗಲ್ಲಿನ ಸಂಸ್ಥೆ ಧರ್ಮೋತ್ಥಾನ ಟ್ರಸ್ಟ್ (ರಿ), ಪುರಾತನ ಸ್ಮಾರಕಗಳ ರಕ್ಷಣೆಯಲ್ಲೂ ತೊಡಗಿರುವ ಸಮಾಜಸೇವಾ ಸಂಸ್ಥೆ.
ಹೊಸ ದೇವಸ್ಥಾನಗಳ ನಿರ್ಮಾಣಕ್ಕಿಂತ ಐತಿಹಾಸಿಕ ಹಿನ್ನೆಲೆಯ ಪುರಾತನ ಸ್ಮಾರಕಗಳ ರಕ್ಷಣೆ ಬಲುಮುಖ್ಯವೆಂಬ ಸದಾಶಯದಿಂದ ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಗಡೆ ಅವರು ಸ್ಥಾಪಿಸಿದ ಸಂಸ್ಥೆ ‘ಧರ್ಮೋತ್ಥಾನ ಟ್ರಸ್ಟ್’. ಕೆಲವೇ ವರ್ಷಗಳಲ್ಲಿ ರಾಜ್ಯದ ೨೫ ಜಿಲ್ಲೆಗಳಲ್ಲಿ ಒಟ್ಟು ೨೫೩ ಪುರಾತನ, ಶಿಥಿಲಗೊಂಡ ಸ್ಮಾರಕಗಳನ್ನು ಜೀರ್ಣೋದ್ಧಾರ ಮಾಡಿದ ಹೆಗ್ಗಳಿಕೆ ಈ ಟ್ರಸ್ಟ್ನದ್ದು. ಟ್ರಸ್ಟ್ನ ಸಂರಕ್ಷಣಾ ಕಾರ್ಯದ ಗುಣಮಟ್ಟ ಹಾಗೂ ಪ್ರಗತಿ ಪರಿಶೀಲಿಸಿ ಸಹಭಾಗಿತ್ವದ ಸಂಸ್ಥೆಯೆಂದು ಸರ್ಕಾರದಿಂದ ಮಾನ್ಯತೆ, ವಾರ್ಷಿಕ ಕ್ರಿಯಾಯೋಜನೆಯಡಿ ಅನುದಾನ ಬಿಡುಗಡೆ, ರಾಜ್ಯದುದ್ದಗಲಕ್ಕೂ ಶಿಥಿಲಗೊಳ್ಳುತ್ತಿರುವ ಅನೇಕ ಪುರಾತನ ದೇವಾಲಯಗಳನ್ನು ಜೀರ್ಣೋದ್ದಾರ ಮಾಡುವ ಹೆಗ್ಗುರಿಯಿಂದ ಮುನ್ನಡೆದಿರುವ ಟ್ರಸ್ಟ್ನ ಸಾಮಾಜಿಕ-ಧಾರ್ಮಿಕ ಕೈಂಕರ್ಯ ಪ್ರಶಂಸನೀಯವೂ ಹೌದು, ಮಾದರಿಯೂ ಸಹ.