Categories
ರಂಗಭೂಮಿ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಪ್ರಕಾಶ್ ಬೆಳವಾಡಿ

ಶ್ರೀ ಪ್ರಕಾಶ್ ಬೆಳವಾಡಿ ಅವರು ಭಾರತೀಯ ರಂಗಭೂಮಿಯಲ್ಲಿ ಬಹು ದೊಡ್ಡ ಹೆಸರು. ಕನ್ನಡ ಹಾಗೂ ಇಂಗ್ಲೀಷ್ ನಲ್ಲಿ ಸುಮಾರು ೭೨ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಬೆಂಗಳೂರಿನ ಸೆಂಟರ್ ಫಾರ್ ಫಿಲ್ಕ್ ಅಂಡ್ ಡ್ರಾಮಾದ ಸಹ ಸಂಸ್ಥಾಪಕರು, ಯುವಪೀಳಿಗೆಗೆ ಚಿತ್ರ ನಿರ್ಮಾಣದಲ್ಲಿ ತರಬೇತಿ ನೀಡಲು ಸುಚಿತ್ರ ಫಿಲಂ ಸ್ಕೂಲ್ ಆಫ್ ಆರ್ಟ್ಸ್ ಸ್ಥಾಪಿಸಿದ್ದಾರೆ.
೨೦೦೨ ರಲ್ಲಿ ಇವರು ನಿರ್ದೇಶಿಸಿದ ಮೊದಲ ಚಿತ್ರ ‘ಸ್ಟಂಬಲ್’ ರಾಷ್ಟ್ರಪ್ರಶಸ್ತಿ ಪಡೆಯಿತು. ಇವರು ಹಲವು ಭಾಷೆಗಳಲ್ಲಿ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪನವರ ಮಹೋನ್ನತ ಕೃತಿ ‘ಪರ್ವ’ ಕಾದಂಬರಿಯನ್ನು ರಂಗರೂಪಕ್ಕೆ ಅಳವಡಿಸಿ, ‘ಪರ್ವ’ನಾಟಕ ನಿರ್ದೇಶಿಸಿ ಯಶಸ್ಸು ಕಂಡಿದ್ದಾರೆ.