Categories
ರಂಗಭೂಮಿ ರಾಜ್ಯೋತ್ಸವ 2008 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಬೈರೇಗೌಡ

ರಂಗಭೂಮಿ, ಸಾಹಿತ್ಯ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಅನೇಕ ವರ್ಷಗಳಿಂದ ದುಡಿಯುತ್ತಿರುವವರು ರಂಗನಟ, ಸಂಘಟಕ ಶ್ರೀ ಬೈರೇಗೌಡ ಅವರು.
೧೯೫೮ನೆ ಇಸ್ವಿಯಲ್ಲಿ ರಾಮನಗರ ಜಿಲ್ಲೆ ಕುರುಬರ ಹಳ್ಳಿಯಲ್ಲಿ ಜನನ. ಪದವಿ ಶಿಕ್ಷಣ ಪೂರೈಸಿ ಸಾಮಾಜಿಕ ಸೇವೆಗೆ ಪಾದಾರ್ಪಣೆ. ಅನೇಕ ಸಂಘ ಸಂಸ್ಥೆಗಳಲ್ಲಿ ಸದಸ್ಯತ್ವ ಹಾಗೂ ಪದಾಧಿಕಾರಿಯಾಗಿ ಸೇವೆ.
ಕನ್ನಡ ಸಾಹಿತ್ಯ ಪರಿಷತ್ತಿನ ತಾಲ್ಲೂಕು ಅಧ್ಯಕ್ಷರಾಗಿ ಜಿಲ್ಲಾ ಸಾಹಿತ್ಯ ಸಮ್ಮೇಳನ, ಕವಿಗೋಷ್ಠಿ ಉಪನ್ಯಾಸಮಾಲೆ, ವಿಚಾರ ಸಂಕಿರಣ, ಚರ್ಚಾ ಸ್ಪರ್ಧೆ ಏರ್ಪಾಟು. ವಿವಿಧ ಬಗೆಯ ಸಾಹಿತ್ಯಕ ಕಾಠ್ಯ ಕ್ರಮಗಳ ಸಂಯೋಜನೆ. ಸುಮಾರು ೨೦ ವರ್ಷಗಳಿಂದ ನಾಡಿನ ವಿವಿಧೆಡೆ ಪೌರಾಣಿಕ ನಾಟಕೋತ್ಸವಗಳನ್ನು ಸಂಘಟಿಸುತ್ತ ಬಂದಿರುವುದು ಇವರ ಹೆಗ್ಗಳಿಕೆ. ಪೌರಾಣಿಕ ನಾಟಕಗಳಲ್ಲಿ ಪ್ರಧಾನಪಾತ್ರ ನಿರ್ವಹಿಸುತ್ತ ತಮ್ಮ ಅಭಿನಯದಿಂದ ಜನರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಕಲಾಶ್ರೀ ಪ್ರಶಸ್ತಿ, ಕರ್ನಾಟಕ ಕಲಾರತ್ನ ಪ್ರಶಸ್ತಿ, ಉತ್ತಮ ನಾಗರೀಕ ಸೇವಾ ಪ್ರಶಸ್ತಿ, ರೋಟರಿ ಸೇವಾ ಪ್ರಶಸ್ತಿ, ಪರಿಸರ ಸೇವಾ ಪುರಸ್ಕಾರ, ಜಾನಪದ ಲೋಕೋತ್ಸವ ಪ್ರಶಸ್ತಿ ಮೊದಲಾದ ಗೌರವ ಪ್ರಶಸ್ತಿಗಳು ಶ್ರೀಯುತರಿಗೆ ಸಂದಾಯವಾಗಿವೆ. ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್ತಿನ ರಾಮನಗರ ಜಿಲ್ಲಾಘಟಕದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ ಶ್ರೀ ಬೈರೇಗೌಡ ಅವರು.