Categories
ಪತ್ರಿಕೋದ್ಯಮ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಮಂಜುನಾಥ ಅಜ್ಜಂಪುರ

ಕಳೆದ ನಾಲ್ಕು ದಶಕಗಳಿಂದ ಪತ್ರಿಕಾ ಮಾಧ್ಯಮದಲ್ಲಿ ಸಕ್ರಿಯರಾಗಿರುವ ಶ್ರೀ ಮಂಜುನಾಥ ಅಜ್ಜಂಪುರ ಅವರು ವಿವಿಧ ದಿನಪತ್ರಿಕೆ, ವಾರಪತ್ರಿಕೆ ಮತ್ತು ನಿಯತಕಾಲಿಕೆಗಳಲ್ಲಿ ೯೦೦ ಕ್ಕೂ ಹೆಚ್ಚು ಅಂಕಣ, ಲೇಖನ,ಕಥೆ ಮತ್ತು ಪ್ರಬಂಧಗಳನ್ನು ಬರೆದವರು.
ಇವರ ಅನುವಾದಿತ ಕೃತಿಗಳು, ಅಂಕಣ ಸಂಕಲನಗಳು ಹಾಗೂ ಜೀವನ ಚರಿತ್ರೆಗಳು ಬಿಡುಗಡೆಗೊಂಡು ಪ್ರಸಿದ್ಧಿ ಪಡೆದಿವೆ. ವಾಟ್ಸ್ ಆಫ್ ಇಂಡಿಯ ಸಾಹಿತ್ಯ ಸರಣಿಯಲ್ಲಿ ಒಂಭತ್ತಕ್ಕೂ ಹೆಚ್ಚು ಕೃತಿಗಳನ್ನು ಸಂಪಾದಿಸಿದ್ದು, ಪ್ರಸ್ತುತ ವಾಟ್ಸ್ ಆಫ್ ಇಂಡಿಯಾ ಸಾಹಿತ್ಯ ಸರಣಿ ಮತ್ತು ಅರುಣ್ ಶೌರಿ ಸಾಹಿತ್ಯ ಸರಣಿಯ ಗೌರವ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.