Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಾಹಿತ್ಯ

ಶ್ರೀ ಮಹಾದೇವ ಶಂಕನಪುರ

ಚಾಮರಾಜನಗರ ಜಿಲ್ಲೆ, ಕೊಳ್ಳೇಗಾಲ ಪಟ್ಟಣದ ಶ್ರೀ ಮಹಾದೇವ ಶಂಕನಪುರ, ಇವರು ಶೋಷಿತ ಸಮುದಾಯದಿಂದ ಬಂದವರು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇತಿಹಾಸ ಸಹಾಯಕ ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತ, ಇತಿಹಾಸ- ಸಂಸ್ಕೃತಿ-ಜಾನಪದ ಅಧ್ಯಯನ ಮತ್ತು ಸಂಶೋಧನೆಯಲ್ಲಿ ಸಾಹಿತ್ಯ ಪ್ರಕಾರವನ್ನು ಕಂಡುಕೊಂಡವರು.
ಮಾರಿಹಬ್ಬಗಳು,ಚಿಕ್ಕಲ್ಲೂರು ಜಾತ್ರೆ,ಮಂಟೇಸ್ವಾಮಿ, ಮಲೆಯ ಮಾದಯ್ಯನ ಸಾಂಸ್ಕೃತಿಕ ಜಾತ್ರೆ, ಮಂಟೇಸ್ವಾಮಿ ಮೌಖಿಕ ಚರಿತ್ರೆ-ಇತ್ಯಾದಿ ಇವರ ಕೃತಿಗಳು. ಸಾಹಿತ್ಯ ಮತ್ತು ಸಂಶೋದನೆಗೆ ಇವರು ಸಲ್ಲಿಸಿರುವ ಸೇವೆಗೆ ೨೦೦೨ ರಲ್ಲಿ ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಪುಸ್ತಕ ಪ್ರಶಸ್ತಿ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದ ತೀನಂಶ್ರಿ ಪುಸ್ತಕ ಪ್ರಶಸ್ತಿ, ಕರ್ನಾಟಕ ದಲಿತ ಸಾಹಿತ್ಯ ಪರಿಷತ್ತು ಪುಸ್ತಕ ಪ್ರಶಸ್ತಿ ಇವರ ಮಡಿಅಗಿವೆ.