Categories
ರಂಗಭೂಮಿ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ರಮೇಶ್ ಗೌಡ ಪಾಟೀಲ

ಕಳೆದ ೫೫ ವರ್ಷಗಳಿಂದ ರಂಗಭೂಮಿಯ ಸೇವೆ ಸಲ್ಲಿಸುತ್ತ ಬಂದಿರುವ ಶ್ರೀ ರಮೇಶ್ ಗೌಡ ಪಾಟೀಲ್ ಅವರು ಸಾಮಾಜಿಕ, ಪೌರಾಣಿಕ ನಾಟಕಗಳ ವೈವಿಧ್ಯಮಯ ಪಾತ್ರಗಳ ಮೂಲಕ ೩೦೦೦ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ಉತ್ತರ ಕರ್ನಾಟಕದಲ್ಲಿ ಮನೆ ಮಾತಾಗಿದ್ದಾರೆ.
ಬಳ್ಳಾರಿ ಜಿಲ್ಲೆಯ ತಾರಾನಗರದವರಾದ ಇವರು, ಕರ್ನಾಟಕ ನಾಟಕ ಅಕಾಡೆಮಿ ಸದಸ್ಯರಾಗಿ ಕೂಡ ಸೇವೆ ಸಲ್ಲಿಸಿದ್ದು ೨೦೦೫ ರಲ್ಲಿ ನಾಟಕ ಅಕಾಡೆಮಿ ಪ್ರಶಸ್ತಿ ಕೂಡ ಪಡೆದುಕೊಂಡಿದ್ದಾರೆ. ರಂಗಭೂಮಿಯ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿರಿಸಿರುವ ಶ್ರೀಯುತರು ವೃತ್ತಿರಂಗಭೂಮಿ ಸಮಾವೇಶ, ವಿಚಾರ ಸಂಕಿರಣ, ವೃತ್ತಿ ನಾಟಕೋತ್ಸವ ಮುಂತಾದ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಮೂಲಕ ನಾಟಕರಂಗದಲ್ಲಿ ಸಕ್ರಿಯರಾಗಿದ್ದಾರೆ.