Categories
ಕ್ರೀಡೆ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ರೋಹಿತ್ ಕುಮಾರ್ ಕಟೀಲ್

ಕಾರ್ಕಳ ತಾಲ್ಲೂಕಿನ ಕ್ರೀಡಾಪ್ರತಿಭೆ ಶ್ರಿ ರೋಹಿತ್ ಕುಮಾರ್ ಕಟೀಲ್‌ ಅಸಾಧಾರಣ ಪ್ರತಿಭೆ, ಹೈ ಜಂಪ್ ವಿಭಾಗದಲ್ಲಿ ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಇವರು ವಿಶ್ವ ಕಿರಿಯರ ತಂಡದಲ್ಲಿ ಭಾರತವನ್ನು ಪ್ರತಿನಿಧಿಸಿದ ಮೊದಲಿಗ.

ಮಾಜಿ ಅಂತಾರಾಷ್ಟ್ರೀಯ ಆಟಗಾರರಾದ ಇವರು, ಬ್ರೆಜಿಲ್ ನಲ್ಲಿ ನಡೆದ ವರ್ಲ್ಡ್ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿನ ಭಾರತೀಯ ತಂಡದಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡಿದವರು. ಇದೀಗ ಕಾರ್ಕಳದ ವಿಮಾ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರಿಗೆ ಹಲವು ಪ್ರಶಸ್ತಿ ಪುರಸ್ಕಾರಗಳು ಲಭಿಸಿವೆ.