ಗದುಗಿನ ಶ್ರೀ ವೀರೇಶ್ವರ ಪುಣ್ಯಾಶ್ರಮ ಸುಮಾರು ಎಳು ದಶಕಗಳಿಂದ ಅಂಧ ಮತ್ತು ಅನಾಥರ ಬಾಳಿಗೆ ಬೆಳಕಾಗಿದೆ. ಈ ಪುಣ್ಯಾಶ್ರಮಕ್ಕೆ ಚೇತನರಾಗಿದ್ದವರು ಪಂ.ಪಂಚಾಕ್ಷರಿ ಗವಾಯಿಗಳು. ಹುಟ್ಟು ಕುರುಡರಾಗಿದ್ದ ಪಂಚಾಕ್ಷರಿ ಗವಾಯಿಗಳ ನಂತರ ಈ ವೀರೇಶ್ವರ ಪುಣ್ಯಾಶ್ರಮಕ್ಕೆ ಕಣ್ಣಾದವರು ಶ್ರೀ ಪುಟ್ಟರಾಜ ಗವಾಯಿಗಳು.
ಸುಮಾರು ೭೦೦ ಅಂಧ, ಅನಾಥ, ವಿಕಲಚೇತನ ವಿದ್ಯಾರ್ಥಿಗಳಿಗೆ ಪ್ರತಿನಿತ್ಯ ತ್ರಿವಿಧ ದಾಸೋಹ ಶ್ರೀ ವೀರೇಶ್ವರ ಪುಣ್ಯಾಶ್ರಮದಲ್ಲಿ ನಡೆಯುತ್ತದೆ. ಅಂಧ ಮಕ್ಕಳಿಗೆ ಜೀವನ ಸಾಗಿಸಲು ಹಾಗೂ ಆತ್ಮವಿಶ್ವಾಸ ತುಂಬುವುದಕ್ಕೆ ಸಂಗೀತವನ್ನು ಕಲಿಸಲಾಗುತ್ತದೆ. ಇಲ್ಲಿ ಆಳವಾಗಿ ಅಧ್ಯಯನ ಮಾಡಿದವರು ಶ್ರೇಷ್ಠ ಗಾಯಕರಾಗಿ ಹೊರಹೊಮ್ಮಿದ್ದಾರೆ. ಕರ್ನಾಟಕ ಹಾಗೂ ಹಿಂದೂಸ್ತಾನಿ ಸಂಗೀತದ ಅಭ್ಯಾಸ ನಡೆಯುತ್ತಿದೆ.
Categories