Categories
ಚಿತ್ರಕಲೆ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ವೆಂಕಣ್ಣ ಚಿತ್ರಗಾರ

ಗಂಗಾವತಿಯ ಶ್ರೀಯುತ ವೆಂಕಣ್ಣ ಚಿತ್ರಗಾರ ಅವರು ಸುಮಾರು ಐವತ್ತು ವರ್ಷಗಳಿಂದ ರಥ ನಿರ್ಮಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿರುತ್ತಾರೆ. ಸುಮಾರು ೧೦೦ ಕ್ಕೂ ಅಧಿಕ ರಥಗಳು ಇವರ ಕೈಯ್ಯಲ್ಲಿ ಅರಳಿವೆ. ಇವರು ನಿರ್ಮಿಸಿರುವ ರಥಗಳು ವಿಜಯನಗರ ಶೈಲಿಯ ವಾಸ್ತುಪ್ರಕಾರ ಹೊಂದಿದ್ದು, ಕೇವಲ ಕೊಪ್ಪಳ ಜಿಲ್ಲೆಗೆ ಮಾತ್ರ ಸೀಮಿತವಾಗದೆ ನೆರೆಯ ರಾಜ್ಯಗಳಾದ ಆಂಧ್ರ, ತೆಲಂಗಾಣ, ಮಹಾರಾಷ್ಟ್ರ ರಾಜ್ಯಗಳಲ್ಲಿಯೂ ಕಾಣಬಹುದು.
ಪರಿಸರಸ್ನೇಹಿ ಸುಂದರವಾದ ಮಣ್ಣಿನ ಮೂರ್ತಿಗಳನ್ನೂ ಸಹ ಮಾಡುವಲ್ಲಿ ಪ್ರಸಿದ್ಧಿ ಹೊಂದಿರುವ ಇವರು ಅನೇಕ ಗ್ರಾಮದೇವತೆಗಳು, ಪಲ್ಲಕ್ಕಿ, ಪೂಜಾ ಮಂಟಪ, ದೇವರ ತೊಟ್ಟಿಲು, ಛತ್ರಿ, ಸಿಂಹಾಸನ ಇತ್ಯಾದಿ ಕರಕುಶಲ ಕೆಲಸಗಳನ್ನು ಮಾಡುತ್ತಾರೆ.
ಅನೇಕ ಸಂಘ ಸಂಸ್ಥೆಗಳು ಇವರ ಕಲಾನೈಪುಣ್ಯತೆಯನ್ನು ಗುರುತಿಸಿ, ಪ್ರಶಸ್ತಿ ಸನ್ಮಾನಗಳನ್ನು ನೀಡಿ ಗೌರವಿಸಿದೆ. ‘ರಥರಚನ ಕೋವಿದ’ ಹಾಗೂ ‘ಕದಂಬ’ಪ್ರಶಸ್ತಿ ಇವರದ್ದಾಗಿವೆ.