Categories
ಜಾನಪದ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ವೆಂಕಪ್ಪ ಗೋವಿಂದಪ್ಪ ಭಜಂತ್ರಿ

ಧಾರವಾಡ ಜಿಲ್ಲೆಯ ಹುಬ್ಬಳ್ಳಿ ತಾಲ್ಲೂಕಿನ ಶೆರೆವಾಡಾ ಗ್ರಾಮದವರಾದ ಶ್ರೀ ವೆಂಕಪ್ಪ ಗೋವಿಂದಪ್ಪ ಭಜಂತ್ರಿ, ಕಳೆದ ೫೫ ವರ್ಷಗಳಿಂದ ಶಹನಾಯಿ ವಾದಕರಾಗಿ ಜಾನಪದ ಕಲೆಯನ್ನು ಶ್ರೀಮಂತಗೊಳಿಸಿದವರು. ಸಣ್ಣಾಟ, ದೊಡ್ಡಾಟ, ಕೋಲಾಟ ಹೆಜ್ಜೆಮೇಳಗಳಲ್ಲಿ ಶಹನಾಯಿ ನುಡಿಸಿ ಪ್ರಸಿದ್ಧರಾಗಿದ್ದಾರೆ. ಇದರ ಜೊತೆಗೆ ಕರಡಿ ಮೇಳಗಳನ್ನು ಕಟ್ಟಿಕೊಂಡು ರಾಜ್ಯಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ನೀಡಿ ಹೆಸರು ಗಳಿಸಿದ್ದಾರೆ. ಮೈಸೂರು ದಸರಾ ಉತ್ಸವ, ಮಂಗಳೂರು ದಸರಾ ಕುದ್ರೋಳಿ ಉತ್ಸವಗಳಲ್ಲಿ ಭಾಗಿಯಾಗಿ ಪ್ರದರ್ಶನ ನೀಡಿದ್ದಾರೆ.
ಗುರುಶಿಷ್ಯ ಪರಂಪರೆಯಲ್ಲಿ ತರಬೇತಿಯನ್ನೂ ಸಹ ನೀಡುತ್ತಿದ್ದಾರೆ. ಧಾರವಾಡ ಆಕಾಶವಾಣಿಯಲ್ಲಿ ಹಲವು ಕಾರ್ಯಕ್ರಮಗಳನ್ನು ನಡೆಸಿಕೊಟ್ಟಿದ್ದಾರೆ. ಇವರ ಸಾಧನೆಯನ್ನು ಪರಿಗಣಿಸಿ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯು ‘ನಮ್ಮ ಸಾಧಕರು’ ಪ್ರಶಸ್ತಿ ನೀಡಿದೆ.