Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಶಿಕ್ಷಣ

ಶ್ರೀ ಶ್ರೀಧರ ಚಕ್ರವರ್ತಿ

ಪ್ರತಿಭಾವಂತ ಬಡ ವಿದ್ಯಾರ್ಥಿಗಳ ಬಾಳಿನಲ್ಲಿ ಅಕ್ಷರದ ದೀವಿಗೆ ಹಿಡಿಯಲು ಸತತ ೩೭ ವರ್ಷಗಳ ಕಾಲ ಗಣಿತ ಶಿಕ್ಷಕನಾಗಿ, ಹುಬ್ಬಳ್ಳಿಯ ಸರಕಾರಿ ಕಿರಿಯ ತಾಂತ್ರಿಕ ಶಾಲೆಯಲ್ಲಿ ಶ್ರಮಿಸಿದ್ದಾರೆ. ಅವರ ಈ ಅವಿರತ ಪ್ರಯತ್ನದ ಫಲವಾಗಿ ಇಂದು ಸಾವಿರಾರು ವಿದ್ಯಾರ್ಥಿಗಳು ನಕ್ಷತ್ರದಂತೆ ವಿವಿಧ ಕ್ಷೇತ್ರಗಳಲ್ಲಿ ಹಾಗೂ ವಿವಿಧ ದೇಶಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ತಮ್ಮ ಸೇವೆಯಲ್ಲಿ ೫೦೦ ಕ್ಕೂ ಹೆಚ್ಚು ವಿದ್ಯಾರ್ಥಿಗಳ ಉನ್ನತ ಅಭ್ಯಾಸದ ಖರ್ಚನ್ನು ತಮ್ಮ ಗಳಿಕೆಯಲ್ಲೇ ನೀಡಿದ್ದಾರೆ. ನಿವೃತ್ತಿಯ ನಂತರವೂ ಸಹ ಅವರು ಮಹಾಗುರು ಎಜುಕೇಶನ್ ಟ್ರಸ್ಟ್ ನ ಮಾರ್ಗದರ್ಶಕರಾಗಿ ತಮ್ಮ ನಿವೃತ್ತಿ ಹಣದ ಶೇ ೯೦ ರಷ್ಟನ್ನು ಟ್ರಸ್ಟ್ ಮೂಲಕ ಬಡ ಪ್ರತಿಭಾವಂತರಿಗೆ ವಿದ್ಯಾರ್ಥಿ ವೇತನ ನೀಡುತ್ತಿದ್ದಾರೆ. ಇವರಿಗೆ ‘ಶಿಕ್ಷಣ ಸಿರಿ’ ಹಾಗೂ ೨೦೦೫ ರ ಆದರ್ಶ ಶಿಕ್ಷಕ ಪ್ರಶಸ್ತಿ, ಮುಂತಾದ ಪ್ರಶಸ್ತಿಗಳು ಲಭಿಸಿವೆ.