Categories
ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ ಸಂಘ-ಸಂಸ್ಥೆ

ಶ್ರೀ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ

ಕಲಬುರ್ಗಿ ಜಿಲ್ಲೆಯ ಸೇಡಂನಲ್ಲಿರುವ ಶ್ರೀ ಕೊತ್ತಲ ಬಸವೇಶ್ವರ ಭಾರತೀಯ ಶಿಕ್ಷಣ ಸಮಿತಿ, ಶಾಲೆಗಳು ಸಾಮಾಜಿಕ ಪರಿವರ್ತನೆಯ ಕೇಂದ್ರವಾಗಬೇಕು ಎಂಬ ಆಶಯದಲ್ಲಿ ಆರಂಭಗೊಂಡ ಸಂಸ್ಥೆ. ಶೈಕ್ಷಣಿಕ ದೃಷ್ಟಿಕೋನದಿಂದ ಸಂಸ್ಥೆ ಇಲ್ಲಿಯವರೆಗೆ ಹಲವಾರು ಯೋಜನೆಗಳನ್ನು ಕೈಗೊಂಡಿದೆ. ೧೯೯೯ ರಲ್ಲಿ ರಜತ ಮಹೋತ್ಸವ ಕಂಡಿರುವ ಈ ಸಂಸ್ಥೆ ಸಾವಿರಾರು ವಿದ್ಯಾರ್ಥಿಗಳಿಗೆ ವಿದ್ಯಾದಾನ
ಮಾಡಿದೆ.
೧೯೭೪ ರಲ್ಲಿ ಆರಂಭಗೊಂಡ ಈ ಸಂಸ್ಥೆ ಇದೀಗ ಸುಮಾರು ೩೫ ಕ್ಕೂ ಹೆಚ್ಚು ಅಂಗಸಂಸ್ಥೆಗಳನ್ನು ಹೊಂದಿರುವ ಈ ಸಂಸ್ಥೆಯು ಅತ್ಯಂತ ಕ್ರಿಯಾಶೀಲವಾಗಿದ್ದು ೨೦೨೪ ರಲ್ಲಿ ಸುವರ್ಣ ಮಹೋತ್ಸವ ಕಾಣಲಿದೆ.