Categories
ಆಡಳಿತ ರಾಜ್ಯೋತ್ಸವ 2021 ರಾಜ್ಯೋತ್ಸವ ಪ್ರಶಸ್ತಿ

ಶ್ರೀ ಹೆಚ್. ಆರ್. ಕಸ್ತೂರಿ ರಂಗನ್

ನಿವೃತ್ತ ಐಪಿಎಸ್ ಅಧಿಕಾರಿ ಹೆಚ್.ಆರ್. ಕಸ್ತೂರಿ ರಂಗನ್ ಅವರು ಹಾಸನ ಜಿಲ್ಲೆಯ ಅರಕಲಗೂಡು ತಾಲ್ಲೂಕಿನವರು. ೧೯೭೨ ರಲ್ಲಿ ಬೀದರ್ ಜಿಲ್ಲೆಯ ಭಾಲ್ಕಿ ವಿಭಾಗದ ಡಿವೈಎಸ್ಪಿ ಯಾಗಿ ತಮ್ಮ ಸೇವೆ ಆರಂಭಿಸಿದರು. ತಮ್ಮ ಸೇವೆಗೆ ಮತ್ತು ತಮ್ಮ ದಕ್ಷ ಕಾರ್ಯ ನಿರ್ವಹಣೆಗೆ ರಾಷ್ಟ್ರಪತಿಗಳ ವಿಶಿಷ್ಟ ಸೇವಾ ಚಿನ್ನದ ಪದಕವನ್ನು ಪಡೆದುಕೊಂಡಿದ್ದಾರೆ.
ಬೆಂಗಳೂರಿನ ಚಿಕ್ಕಪೇಟೆಯ ಅಧೀನ ಪೊಲೀಸ್ ಆಯುಕ್ತರಾಗಿ, ಮೈಸೂರಿನಲ್ಲಿ ಹೆಚ್ಚುವರಿ ಎಸ್.ಪಿ ಆಗಿ, ಎರಡು ಬಾರಿ ಜಾಗೃತದಳದ ಎಸ್.ಪಿ ಆಗಿ ಹಾಗು ಕೊಡಗು ಜಿಲ್ಲೆಯ ಎಸ್.ಪಿ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಹಲವು ಹುದ್ದೆಗಳನ್ನು ಅಲಂಕರಿಸಿ, ಹಲವು ಜವಾಬ್ದಾರಿಗಳನ್ನು ಯಶಸ್ವಿಯಾಗಿ ನಿಭಾಯಿಸಿ ಐ.ಜಿ.ಪಿ ಆಗಿ ನಿವೃತ್ತಿ ಹೊಂದಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ಅತ್ಯುತ್ತಮ ಕೆಲಸಕ್ಕಾಗಿ ಮುಖ್ಯಮಂತ್ರಿಗಳ ಚಿನ್ನದ ಪದಕ ಹಾಗೂ ನಗದು ಬಹುಮಾನ ದೊರೆತಿದೆ. ೧೯೮೮ ರಲ್ಲ ರಾಷ್ಟ್ರಪತಿಗ ಪೊಲೀಸ್ ಚಿನ್ನದ ಪದಕ ದೊರೆತಿದೆ.