Categories
ರಾಜ್ಯೋತ್ಸವ 2017 ರಾಜ್ಯೋತ್ಸವ ಪ್ರಶಸ್ತಿ ಶಿಲ್ಪಕಲೆ

ಹೊನ್ನಪ್ಪಾಚಾರ್ಯ

ನಾಡಿನ ಹೆಸರಾಂತ ಲೋಹಶಿಲ್ಪಿಗಳಲ್ಲಿ ಒಬ್ಬರಾದ ಶಿಲ್ಪಿ ಹೊನ್ನಪ್ಪಾಚಾರ್ ಕಳೆದ ಐದು ದಶಕಗಳಿಂದ ವೈವಿಧ್ಯಮಯವಾದ ಲೋಹ ಶಿಲ್ಪಗಳನ್ನು ತಯಾರಿಸುವಲ್ಲಿ ನಿರತರಾಗಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಅಗತ್ಯಗಳಿಗೆ ಅನುಗುಣವಾಗಿ ಶಿಲ್ಪಗಳನ್ನು ನಿರ್ಮಿಸಿಕೊಟ್ಟಿರುವ ಹೊನ್ನಪ್ಪಾಚಾರ್ ಗುರುಕುಲ ಮಾದರಿಯ ಶಿಲ್ಪಕಲಾ ತರಬೇತಿ ಶಾಲೆಯನ್ನು ಆರಂಭಿಸುವ ಮೂಲಕ ನೂರಾರು ಮಂದಿ ಆಸಕ್ತರನ್ನು ಶಿಲ್ಪಕಲೆಯಲ್ಲಿ ತರಬೇತುಗೊಳಿಸಿದ್ದಾರೆ.

ವಿಶ್ವಕರ್ಮ ರಥೋತ್ಸವ ಸಮಿತಿ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿರುವ ಶಿಲ್ಪಿ ಹೊನ್ನಪ್ಪಾಚಾರ್ ಕೇಂದ್ರ ಸರ್ಕಾರದ ಅಧಿಕೃತ ಶಿಲ್ಪಿಯಾಗಿ ಪರಿಗಣಿಸಲ್ಪಟ್ಟಿದ್ದು ಕರ್ನಾಟಕ ಲಲಿತಕಲಾ ಅಕಾಡೆಮಿ ಸದಸ್ಯರಾಗಿಯೂ ಕಾರ್ಯ ನಿರ್ವಹಿಸಿದ್ದಾರೆ. ಆಳ್ವಾಸ್ ನುಡಿಸಿರಿ ಗೌರವ, ಬೆಂಗಳೂರು ಕೆಂಪೇಗೌಡ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳು ಇವರಿಗೆ ಲಭಿಸಿವೆ.