Categories
ರಚನೆಗಳು

ಸುಂದರವಿಠಲ

ಅಥ ಹನುಮದ್ವ್ರತ ಕಥಾ ಸುಳಾದಿ
ಧ್ರುವ ತಾಳ
ವೃತವೆ ಉತ್ತಮ ವೃತವೆಂದು ಪೇಳಿಹರು
ಅತುಳ ಜ್ಞಾನನಿಧಿ ವಿಜಯಾಖ್ಯ ಗುರುಗಳು |
ಸತತ ಅಧ್ಯಾತುಮ ಅನಂತ ವೃತವೆಂದು |
ಕ್ಷಿತಿಯೊಳು ಈ ವೃತಕೆ ಸರಿಗಾಣೆನೊ |
ಪತಿತ ಮಾನವರ ಉದ್ಧಾರಗೋಸುಗವಾಗಿ
ದ್ವಿತಿಯ ಉತ್ತಮ ವೃತವು ಹನುಮದ್ಪ್ರತವೂ |
ಯತನ ಜ್ಞಾನೇಚ್ಛಾ ಶಕ್ತ್ಯಾದಿಗಳಿಗೆ ನಿರುತ |
ಜತೆಯಾಗಿ ಕಾರ್ಯ ಮಾಳ್ಪ ಜ್ಞಾನಾಖ್ಯವೃತವೊ |
ಅತಿಶಯವಾದ ಜ್ಞಾನ ಭಕ್ತಿ ವಿರಕ್ತಿವೀವುದು |
ಮತಿವಂತರು ಮನಕೆ ತಂದು ತಿಳಿದು |
ಕ್ಷಿತಿಪತಿ ಧರ್ಮರಾಜನೆಸಗಿದ ಮಹಾ ವೃತವೊ |
ಪತಿಭಕುತಿಯುಕುತಳಾದ ದ್ರೌಪದಿಯು |
ಪತಿ ಮೂರ್ಲೋಕದ ಶ್ರೀ ಕೃಷ್ಣನುಪದೇಶದಂತ್ಯೆ |
ಮಿತ ಜ್ಯಾನದಿಂದ ಚರಿತ ವ್ರತವೊ |
ಹಿತವಂತ ಹನುಮಂತ ಪಿತ ರಾಮನಿಗೆ ಪೇಳೆ ಆ |
ಚ್ಯುತನಾದ ರಾಮನುಮತಿವಾನ್ ಹನು |
ಮಂತನ ಭಕುತಿಗೊಲಿದು ಮಾಡ್ಡ ವೃತವೊ |
ಸತತ ಸೂತರು ಶೌನಕಾದ್ಯರಿಗಿದರ ಮಹಿಮೆ |
ಮಿತಿ ಇಲ್ಲದೇ ಪೇಳಿ ಮಾಡಿಸಿದ ವೃತವೊ |
ವೃತತಿಜಾಸನ ಪ್ರಿಯ ಸುತ ಸುಂದರ ವಿಠಲನ ಭ |
ಕುತಿ ಜ್ಞಾನವೀವ ಮಹಾ ಶ್ರೇಷ್ಠ ವೃತವೊ ೧
ಮಟ್ಟತಾಳ
ಜಾನ್ಹವೀ ತೀರದಲಿ ಶೌನಕಾದ್ಯ ಮುನಿಗಳು |
ಧ್ಯಾನಿ ಸೂತರ ಕುರಿತು ಸಾನುರಾಗದಿ ನಮಿಸಿ |
ಮೇಣು ಭಕುತಿಯಿಂದ ಜ್ಞಾನವಂತರೆ ನಿಮ್ಮಿಂ |
ದಾನೇಕ ವೃತಮಹಿಮೆಯಾನು ಕೇಳಿ ನಿತ್ಯ |
ಧೇನಿಸುವೆವು ಹರಿಯಾ ಪುನೀತರ ಮಾಡುವಾ |
ಕಾಣೋವನ್ಯ ವೃತವು ಆವುದುಪೇಳೆನಲು |
ಪ್ರಾಣದ ಪಾವನಿಯ ಪರತರ ಪ್ರಿಯ ವ್ರತವು |
ಸಾನುರಾಗದಿ ನಿತ್ಯ ಶೂದ್ರಾದಿ ನಾಲ್ಕು |
ಜಾಣ ವರ್ಣರಿಂದ ಮಾಡ್ವದಕ್ಕೆ ಯೋಗ್ಯವೊ |
ಏನು ಬೇಡಿದರೆ ತಡಿಯದೆ ಕೊಡುವುದೊ |
ಜ್ಞಾನಿ ಜನಗಳಿಗೆಲ್ಲ ಮಂಗಳತಮ ವೃತವು |
ಏನು ಪೇಳಲಿ ಮತ್ತೆ ಆರೋಗ್ಯ ಐಶ್ವರ್ಯ
ಪುತ್ರಾದಿಗಳೀವುದು
ಶ್ರೇಣಿ ದಿನ ಪ್ರತಿ ದಿನದಲ್ಲಿ ವರವಿದ್ಯ ಪ್ರದವೊ
ಹಾನಿ ಲಾಭಗಳಲ್ಲಿ ಹನುಮಂತನ ನೆನಸೆ |
ಮಾನನಿಧಿ ಸುತ ಸುಂದರ ವಿಠಲನ |
ಧ್ಯಾನ ಧಾರಣವೀವ ಉತ್ತುಮಾಮಹವೃತವೊ ೧
ರೂಪಕ ತಾಳ
ಒಂದಾನೊಂದು ಸಮಯದಲ್ಲಿ ಶ್ರೀ ವ್ಯಾಸ ಶಿಷ್ಯ |
ವೃಂದದಿಂದೊಡಗೂಡಿ ಯುಧಿಷ್ಠರನ ನೋಡಲು |
ಅಂದುಳ್ಳ ದ್ವೈತ ವನಕೆ ನಡೆತಂದರು ಏನಂಬೆ |
ಚಂದಾದ ನಿರ್ವೈರ ಮೃಗವೃಂದಗಳಿಂ ಕೂಡಿರುವ |
ಕುಂದ ಮಂದಾರಾದಿ ಪುಷ್ಪಫಲ ವೃಕ್ಷಗಳಿಂ ಶೋಭಿಪ |
ಕುಂದು ದೂರೋಡಿಸಿದ ಜ್ಞಾನಿಗಳ ಸಮೂಹವು |
ಛಂದದಲಿ ಕಾವ್ಯಷಡಂಘ್ರಿ ನಿರತರಾಗಿ |
ಮುಂದೆ ಅಧ್ಯಯನ ಶ್ರುತಸಂಪನ್ನರಾದವರು |
ಒಂದೊಂದು ವೇದ ಋಗು ಯಜು:ಸಾಮಾಥರ್ವಣ
ಒಂದೋಂದು ಶಾಖಾಶಾಸ್ತ್ರದಿ ಪ್ರವಚನಾಸಕ್ತರು |
ಮಿಂದು ಹರಿಪದಜಲದಿ ಚತುರ ವೇದ ಘೋಷದಿ |
ಸಂದೇಹವಿಲ್ಲದಲೇ ಭಗವದ್ಗೀತಾ ಲೀಲಾ |
ಎಂದೆಂಬುವ ಹರಿಕಥಾಮೃತ ಪಾನ ಮಾಡುವ |
ಸಂದೋಹ ಮುನಿಗಳಿಗೆ ನಿತ್ಯನ್ನದಾನವ ಮಾಡಿ |
ಬಂಧುಗಳಿಂ ಸಹಿತ ಇರುವ ಯುಧಿಷ್ಟರನನ್ನು |
ಸುಂದರ ವಿಠಲಾತ್ಮಕ ವ್ಯಾಸದೇವನು |
ಅಂದು ದ್ವೈತವನದಲ್ಲಿ ಕೃಪಾ ದೃಷ್ಟಿಯಿಂದ ನೋಡಿದನು ೩
ಝಂಪಿ ತಾಳ
ಕೃಷ್ಣದ್ವೈಪಾಯನಾ ಮುನಿಗಳಾಗಮ ಕೇಳಿ |
ಕೃಷ್ಣೆ ಸಹಿತಾ ಅನುಜರೊಡನೆ ಕೂಡಿ |
ಜೇಷ್ಠನಾದ ಯುಧಿಷ್ಠರನು ತಾ ದೂರ ನಡೆತಂದುವಾ |
ಸಿಷ್ಟ ಕೃಷ್ಣಗೆ ಸಾಷ್ಟಾಂಗ ಪ್ರಣಾಮಗಳ ಮಾಡಿ ನಿ |
ರ್ದಿಷ್ಟವಾದೆಕಾಂತ ಸ್ಥಳಕೆ ಕರೆತಂದು |
ಶ್ರೇಷ್ಠವಾದಾಸನದ ಮೇಲೆ ಕುಳ್ಳಿರಿಸಿ |
ಜೇಷ್ಟಾದಿಕೃಷ್ಣೇಯೊಡನೆ ಉತ್ರ‍ಕಷ್ಠ ಪೂಜೆಯ ಮಾಡೆ ಪರ
ಮೇಷ್ಠಿ ಜನಕನು ತಾನು ತುಷ್ಟ ನಾಹೆ |
ಶಿಷ್ಟಾಚಾರದಂತೆ ಕುಶಲ ಪ್ರಶ್ನೆಯು ಮಾಡ್ದ ನಿ |
ರ್ದುಷ್ಟ ಭೀಮಾರ್ಜುನರೆ ಅಶ್ವಿನಿಯರೇ ಮನ |
ಮುಟ್ಟಿ ಹರಿಪಾದ ಭಜನೆಯ ಮಾಡಿ ಸುಖಿಗಳಾಗಿಹ್ಯರೇ?
ಧಿಟ್ಟತನದಲೆ ತಪವನೆಸಗಿ ಕಿರಿಟಯು |
ನಿಷ್ಠಿಯಲಿ ಮಹರುದ್ರನೊಲಿಸಿ ಪಾಶುಪತವೆಂಬು |
ತ್ರ‍ಕಷ್ಟಾಸ್ತ್ರ ಸಂಪಾದನೆಯ ಮಾಡಿದದು ಕೇಳಿ |
ಹೃಷ್ಟನಾದೆನೊ ನಾನು ನಿಮ್ಮಿಂದಲಿ ಕೂಡಿ |
ಕಷ್ಟಬಡುತಿರುವ ನಿನ ದುಃಖ ಶಾಂತ್ಯರ್ಥ |
ಇಷ್ಟವೀವುದಕಾಗಿ ಬಂದಿಹನು ರಾಜಾಯು |
ದ್ಯಿಷ್ಟರನೆ ಕೇಳುತ್ತಮ ವೃತವು ನಿನಗೋಸುಗ |
ಸೃಷ್ಟಿಗೊಡೆಯ ಸುಂದರವಿಠ್ಠಲ ಪೇಳ್ವೆನೆನಲು
ನಿಷ್ಠಿಯಿಂದಲಿ ಧರ್ಮತನಯ ನುಡಿದನು ೪
ತ್ರಿವಿಡಿ ತಾಳ
ನಮೊ ನಮೊ ತಾತ ಮಹಾ ಖ್ಯಾತವಂತರೆ ನಿಮಗೆ |
ನಮೊ ನಮೊ ನಮೊ ಎಂದು ಬಿನ್ನೈಸುವೆ |
ಶ್ರಮ ಪರಿಹರವೃತವಾವುದದರ ಮಹಿಮೆ |
ಸುಮನಸರೊಡೆಯನೆ ಪೇಳಯ್ಯಾ ಜೀಯ್ಯಾ |
ಕುಮತಿ ಪರಿಹರಿಸುವ ದೇವತೆ ಆರು ಉ |
ತ್ತಮ ನಿಯಮ ಆವುದು ಪೂಜಾ ಕ್ರಮವು |
ಶಮೆ ದಮೆವೀವ ನಿಯಮ ತಿಥಿ ಆವುದು |
ರಮೆ ರಮಣನೆ ಆವ ಮಾಸದಲಿ ಮಾಡೋದು |
ಶಮಲ ವಿವರ್ಜಿತ ವ್ಯಾಸದೇವನೆ ನಿಮ್ಮಾ |
ಗಮನವು ಎಮ್ಮಯ ಕಷ್ಟ ದೊರೋಡಿಸಲು |
ಸಮೀಚೀನ ಮತಿಯಿತ್ತು ಭಕ್ತರ ಪಾಲಿಪುದೆನುತ |
ಸಮಚಿತ್ತ ಉಳ್ಳ ಮುನಿಗಳ ಕೂಡ ನಮಿಸಲು |
ಭ್ರಮಣ ಮತಿಯ ಕಳೆವ ಹನುಮಾನ್ ಹ
ನುಮನ್ನಾಮ ಪುನಃ ಪುನಃ ಸ್ಮರಿಸಿ ಶ್ರೀವ್ಯಾಸರು |
ಆಮಮ ಪೇಳಲೇನೊ ಹನುಮದ್ವ್ರತವೋ |
ಧೀಮಂತ ಹನುಮಂತನ ನಾಮೋಚ್ಚಾರಣೆಯಿಂದ |
ಸಮಸ್ತ ಕಾರ್ಯ ಸಿದ್ದಿಪದು ಸಂಶಯ ಬ್ಯಾಡಿ |
ಆ ಮಹಾ ದುಷ್ಟ ಗ್ರಹೋಚ್ಛಾಟನ ಜ್ವರಾದಿ |
ತಾಮಸ ರೋಗ ನಿವರಣವಾಗುವದು |
ಪ್ರೇಮದಿಂದಲಿ ಕೇಳು ಬಹು ವಾಕ್ಯಗಳಿಂದೇನು ?
ಸೀಮೆಗಾಣದ ಅಭೀಷ್ಟಪ್ರದಾಯಕವೊ
ನೀ ಮರೆಯದಿರು ಹಿಂದೆ ದ್ವಾರಕಿಯಲ್ಲಿ
ಶ್ರೀ ಮದ್ವಿಷ್ಣುವೆ ಕೃಷ್ಣ ಪಾಂಚಾಲಿಯನಿ
ಸ್ಸೀಮ ಭಕುತಿಗೆ ವೊಲಿದು ಈ ಮಹಾ ಹ
ನುಮದ್ವ್ರತವನ್ನು ಉಪದೇಶಿಸಿ |
ನೇಮದಿಂದಲೀ ವ್ರತವು ಮಾಡಿರೆನಲು
ಕಾಮಿತಫಲವೀವಾ ವ್ರತದ ಮಹಿಮೆ ಆ |
ಸ್ವಾಮಿ ಅನುಗ್ರಹದಿ ಸಂಪದೈಶ್ವರ್ಯದಿ
ಆ ಮಹಾ ಸ್ತೋಮಗಳು ಪ್ರಾಪ್ತವಾಗಲು ನಿಮಗೆ |
ಈ ಮಹಾ ವೃತ ಮಹಿಮೆ ತಿಳಿಯದ ಪಾರ್ಥನು
ಪ್ರೇಮದಿಂ ದ್ರೌಪದಿ ಧರಿಸಿದ ದೋರವ ನೋಡಿ
ಹೇ ಮಹಿಷಿಯೆ ಇದೆನೆನ್ನಲಾಗಿ |
ತಾಮರಸನಯನೆ ಶ್ರೀ ಹನುಮದ್ದೋರವನ್ನೆ |
ಆ ಮಹಾ ಐಶ್ವರ್ಯ ಗರ್ವಿಕೆ ಕ್ರೋಧಾದಿ ನಿ
ಸ್ಸೀಮ ಪರಾಕ್ರಮಿ ನುಡಿದ ಅರ್ಜುನನು
ಕಾಮಿನಿಯೆ ಕೇಳು ಆ ಹನುಮನೆಂಬೊ ಕಪಿ
ನಾ ಮುದದಿ ಧ್ವಜದಲ್ಲಿ ಧರಿಸಿರುವೆನು ಈ |
ಮರ್ಮವನು ತಿಳಿಯದೆ ಆ ವನಚರ ಶಾಖಾಮೃಗ |
ಕಾಮಿತ ಫಲ ಕೊಡಬಲ್ಲದೆ ಕೇಳಿನ್ನು
ಪಾಮರ ವ್ರತದಿಂದ ವಂಚಿಸಿದೆಲ್ಲದೇ ನೀನು
ಕಾಮಿ ಜನರ ತೆರದಿಂದಲಿ ಅರ್ಜುನನು
ಭಾಮೆ ದ್ರೌಪದಿ ಧರಿಸಿದ ತ್ರಯೋದಶ ಗ್ರಂಥಿಯುಕ್ತ
ಆ ಮುದದ ದೋರವನು ಹರಿದು ಬಿಸಾಟಲು
ಹೇಮಾದಿ ಸಕಲ ಸಂಪದೈಶ್ವರ್ಯ ರಾಜ್ಯವು
ಭೂಮಿ ಸಹಿತ ಪ್ರಾಪ್ತವಾದುದೆಲ್ಲ ಪೋಗೆ |
ಭ್ರಾಮಕ ಮತಿಯಿಂದ ನೀವುಗಳೀಪರಿ
ಶ್ರಿಮದಾಂಧದಿಂದ ಪ್ರಾಪ್ತವ್ಯ ದುಃಖ ಫಲವು |
ಸ್ವಾಮಿ ಆಜ್ಞದಿ ಹದಿಮೂರೊರುಷ ಪರಿಯಂತ |
ನೇಮಿಸಿದಂತೆ ಅನುಭವಿಸಬೇಕಯ್ಯಾ ಶ್ರೀ
ರಾಮ ಮನೊರಮನು ಇನಿತು ನುಡಿಯೆ |
ಸ್ವಾಮಿ ಆಜ್ಞವ ತಿಳಿದ ದ್ರೌಪದಿ ದೇವಿಯು |
ಹೇ ಮಹತ್ಮರೆ ಶ್ರೀವ್ಯಾಸರ ನುಡಿ ನಿಜವೋ
ಭೀಮಭವಾಬ್ಧಿ ದಾಂಟಿಸುವ ಸುಂದರ ವಿಠಲನ
ನೇಮಗಳೆಲ್ಲಾ ತಿಳಿಯಲೋಶವೆ ಎಂದಿಗು ೫
ಧ್ರುವ ತಾಳ
ಕೇಳಯ್ಯಾ ಧರ್ಮರಾಜ ಆಲಸ ಮಾಡದೆ |
ಪೇಳುವೆ ನಿನಗೊಂದು ಪುರಾತನ ಕಥೆಯು |
ಆಲಿಸಿ ಮನಕೆ ತಂದು ಬಾಳು ಚನ್ನಾಗಿ ನೀನು |
ಶೀಲೆ ಸೀತೆಯ ನೋಡುವ ಇಚ್ಛಾಉಳ್ಳ ಮಾ
ಲೋಲ ರಾಮನು ನಿತ್ಯ ಲಕ್ಷ್ಮಣನೊಡಗೂಡಿ |
ಮೇಲಾದ ಋಷ್ಯಮೂಕ ಗಿರಿಯ ಮಧ್ಯದಲ್ಲಿ
ಶೀಲ ಭಕುತಿಯುಳ್ಳ ಹನುಮಂತನ ದರ್ಶನಾಗೆ
ಆಳುವ ಕಪಿ ರಾಜ್ಯ ಸುಗ್ರೀವನ ಸಖ್ಯವನು ಬ
ಹಾಳ ಮತಿಯುಳ್ಳ ವಾಯುಜ ಮಾಡಿಸೆ |
ನಾಲಕು ಮಾಸ ಮಳೆಗಾಲವು ವಾಸ ಮಾಡ್ಡ |
ಕಾಲದಲಿ ಹನುಮನು ರಾಮದೇವಗೆ ನಮಿಸಿ |
ನೀಲ ಮೇಘ ಶ್ಯಾಮ ಶ್ರೀ ರಾಮ ನೀನಿನ್ನ |
ಬಾಲನ ಬಿನ್ನಪ ಮನಕೆ ತರಲು |
ಪೇಳುವೆ ನಿಮ್ಮ ಸನ್ನಿಧಾನದಲೆನ್ನ ನಾಮ ಮಹಿಮೆ
ಮೇಲುಸಿಲೆಯನದ್ಧರಿಸಿದ ಶ್ರೀರಾಮ ನೀನಙ್ಞನೆ |
ಕಾಲ ಜನನದಲಿ ಇಂದ್ರನಿಂದಲಿ ಎನ್ನ
ಮೇಲಾದ ವಜ್ರಾಯುಧದಿಂದ ಹನುಘಾತಿಸಲು
ಭೂಲೋಕದಲ್ಲಿ ಅಂದಿನಾರಭ್ಯ ಹನುಮನೆಂದು ಖ್ಯಾತನಾಗಿ |
ಕೇಳಯ್ಯಾ ಅಂಜನಾದ್ರಿಯಲ್ಲಿ ಸೂರ್ಯೋದಯ |
ಕಾಲಕೆ ಪ್ರಕಟನಾದ ಬಾಲ ರವಿಯ ನೋಡಿ ಹಣ್ಣೆಂದು |
ಮೇಲಾಗಿ ಭಕ್ಷಿಪುದಕೆ ಉಡ್ಡಾಣ ಮಾಡಲಾಗಿ |
ಈ ಲೀಲೆಯ ತಿಳಿದು ಲೋಕ ಶಿಕ್ಷಣ ಗೋಸುಗ |
ಕಾಲವಜ್ರಾಯುಧದಿಂದ ಹೊಡೆಯಲು ಮೂರ್ಛಿತ |
ಬಾಲನಂತೆ ಬಿದ್ದವನೆನ್ನ ನೋಡಿ ಸ್ವಾಹಾ |
ಲೋಲನ ಸಖನಾದ ವಾಯುದೇವನು ಎನ್ನ |
ಮೇಲಿನ ಪ್ರೀತಿಯಿಂದ ಸರ್ವಜೀವರ ಶ್ವಾಸ |
ಕಾಲನಾಮಕ ಭಗವಾನಿಚ್ಛೆಯಂತ ತೃಟಿ |
ಕಾಲಬಿಡದೆ ಮಾಡ್ವ ಶ್ವಾಸ ನಿರೋಧಿಸೆ ಶಚಿ |
ಲೋಲನಿಂದನ್ನ ಪುತ್ರನ ಕೆಡಹಿರಲವನನ್ನು ಈ |
ಕಾಲಲವದಲ್ಲಿ ಕೆಡಹೆನೆನಲು ಆ |
ಕಾಲದಲಿ ಬ್ರಹ್ಮಾದಿ ದೇವತೆಗಳು ಸಾಕ್ಷಾತ್ಕಾರರಾಗಿ |
ಓಲೈಸಿ ಪೆಳ್ದ ಮಾತು ಎನಗೋಸುಗ ಆಂಜನೇಯಾ |
ಬಾಲನೆ ಚಿರಜೀವಿಯಾಗು ನೀನೆ ಪರಾಕ್ರಮಿ |
ಮೇಲೆನಿಪ ಶ್ರೀರಾಮನ ಕಾರ್ಯಸಾಧಕನಾಗೆನುತ |
ಬಾಲ ಹನುಮನ ಪೂಜೆ ಮಾಡ್ಡರು ದೇವತೆಗಳು |
ಮೇಲಾದ ಮಾರ್ಗಶಿರ ಶುದ್ಧ ತ್ರಯೋದಶಿ |
ಕಾಲ ಅಭಿಜಿನ್ ಮೂಹೂರ್ತದಲ್ಲಿ ಆರು ಪೂಜಿಪರೊ |
ಆಲಸವಿಲ್ಲದೆ ಪುರುಷಾರ್ಥ ಹೊಂದುವರೆಂದು |
ತಾಳ ಮ್ಯಾಳರೊಡನೆ ವರವ ನೀಡಿ ಪೋದರು |
ಆಲಯಾ ಸ್ವರ್ಗ ಸತ್ಯಾದಿ ಲೋಕಕೆ ಅಂದು ಹೀಗೆ |
ಪೇಳೆ ಸುಂದರ ವಿಠಲ ರಘುರಾಮನು ನಸುನಗೆ |
ಯಾಲಿ ಒಲಿದು ಹನುಮಗೆ ಹಸನ್ಮುಖನಾಗಿ ಇರಲು ೬
ಮಟ್ಟತಾಳ
ಭಕುತ ವತ್ಸಲ ನೀನು ಭಕುತರಿಚ್ಛವ ನೀನು |
ಭಕುತ ಭಾಂಧವ ನೀನು ಭಕುತರೊಡಿಯ ನೀನು |
ಭಕುತ ಪಾಲಕನೆಂಬ ಬಿರುದುಳ್ಳವ ನೀನು |
ಭಕುತರಿಂದಲಿ ನೀನು ನಿನ್ನಿಂದಲೆ ಭಕುತರು |
ಅಕಳಂಕ ಐಶ್ವರ್ಯ ಸತು ಚಿತು ಆನಂದಾತ್ಮಾ |
ಮುಕುತಿ ಪ್ರದಾತನೆ ಸರ್ವ ಸ್ವಾಮಿ ನೀನು |
ಸಕಲ ಲೋಕಗಳೊಡೆಯ ನಿನ್ನಿಂದಲೆ ಸರ್ವ
ವ್ಯಕುತವಾಗ್ವದು ಸತ್ಯ ಸರ್ವಙ್ಞನು ನೀನು |
ಭಕುತರ ಮನದಿಂಗಿತ ತಿಳಿಯದವನೆ ನೀನು |
ಅಖಿಳ ಬ್ರಹ್ಮಾಂಡರಸನೆ ನಮೊ ನಮೊ ನಮೊ ನಮೊ |
ಭಕುತರಿಂದಲೇ ನಿನ್ನ ಖ್ಯಾತಿ ಮೂರ್ಲೋಕಕ್ಕೆ
ಭಕುತರೇ ನಿನ್ನಯಾ ಮಹಿಮೆಯ ಹೊಗಳುವರು |
ಭಕುತರು ನಿನ್ನಿಂದಲೆ ಕೀರ್ತಿವಂತರಹರು |
ಅಕುಟಿಲ ಪ್ರಭೋ ನೀನು ನಾ ನಿನ ನಿಜ ಭಕ್ತ |
ಸಕಲ ಕಾಲದಲ್ಲಿ ನಿನ್ನನಾ ಮರೆಯದಲೇ |
ವಿಖನಾಸಂಡದಲ್ಲಿ ಸೇವೆ ಮಾಳ್ಪದು ನಿಜವಾಗೆ |
ಶಕುತನೆ ಎನ ಕೀರ್ತಿ ನಿನ್ನಿಂದಾಗಲಿ ವಿಭೋ |
ಉಕುತಿ ಲಾಲಿಸು ಪ್ರಭೋ ತವಚಿತ್ತವ ಧಾರೆ |
ಭಕುತ ಹನುಮಂತ ಇನಿತು ವಿಜ್ಞಾಪಿಸಿ ನಿಲಲು |
ಪ್ರಕಟಿತ ಅಶರೀರ ವಾಕ್ಯವು ಬಿಡದಲೆ |
ಸಕಲ ನುಡಿ ಹನುಮಾ ಸತ್ಯನಾಡಿದನೆನಲು |
ಸುಕರ ಏಕಮೇವ ದ್ವಿತಿಯ ಸುಂದರವಿಠಲ ತುಷ್ಟನಾಹೆ ೭
ಝಂಪಿತಾಳ
ಮಾಸಮಾರ್ಗಶೀರ್ಷ ಶುದ್ಧ ತ್ರೊಯೋದಶಿ |
ಆ ಸುಮುಹೂರ್ತ ಜಯಾ ಅಭಿಜಿನ್ ಕಾಲಕೆ |
ಶ್ರೀಶರಾಮನು ಹನುಮದ್ವ್ರತವ ಮಾಡ್ಡ ತ್ರಯೋ |
ದಶ ಗ್ರಂಥಿüಯುತ ಹರಿದ್ರಾದೋರಗಳಲಿ |
ಭಾಸುರಾಮತಿವೀವ ಹನುಮನಾವ್ಹಾನಿಸಿ |
ಪೇಶಲಾಪೀತಗಂಧ ವಸ್ತ್ರ ಪುಷ್ಟಿಗಳಿಂದಲೀ |
ಶ್ರೀಸೀತೆವಕ್ಷಸ್ಥಳದಿಪ್ಪ ನಿತ್ಯಾವಿಯೋಗಿನಿ |
ಆ ಸುಗ್ರೀವ ಲಕ್ಷ್ಮಣಾದಿಗಳೊಡನೆ ನೆಸಗಿದನೇನೆಂಬೆ |
ಲೇಶಬಿಡದೇ “ಓಂ ನಮೋಭಗವತೇ ವಾಯುನಂದನಾಯ” |
ಈ ಸುಮಂತ್ರವ ಜಪಿಸಿ ತಾ ಸಹಸದಿ ಮಾಡ್ಡನೋ |
ದೇಶಪರಿಮಿತ ಪ್ರಸ್ಥತ್ರಯೋಶಗೋಧೂಮವನು |
ಆ ಸುದಕ್ಷಣೆ ತಾಂಬೂಲ ಸಹ ದ್ವಿಜರಿಗಿತ್ತದಾನ |
ಮೀಸಲಾ ಮನದಿ ಈ ಸತ್ಕಥೆಯನು ಕೇಳಿ |
ಭೇಶಮುಖಿ ಸೀತಿಯಳ ಕೊಡ್ದನೆಂಬದು ಖ್ಯಾತಿ |
ಆ ಸತ್ಯಲೋಕರಿಗೆ ಆದುದು ಅಚ್ಚರವೆ ಪೂರ್ಣಕಾಮನಿಗೆ |
ಕ್ಲೇಶನಾಶನವು ಸುಗ್ರೀವನಿಗೆ ವಿಶೇಷವಾದುದು ಸತ್ಯವೆನ್ನಿ |
ತೋಷದಲಿ ವಿಭೀಷಣ ಶ್ರೀರಾಮನಾಙ್ಞಯಿಂ ಮಾಡ್ಡು |
ದೇಶಲಂಕೆಯ ರಾಜ್ಯವನು ಪಡೆದನು |
ಹೇ ಸುಮತಿಯೇ ಕೇಳಂದಿನಾರಭ್ಯ ಭೂಲೋಕಕೆ |
ಲೇಸುವಿಶ್ರುತವಾದಿತೈ ಹನುಮದ್ವ್ರತವೂ |
ಆಸುಸಂವತ್ಸರ ತ್ರಯೋದಶ ಪರಿಯಂತ ಮಾಡ್ಡುದ
ಕೀಸು ಉದ್ಯಾಪನೆಯಯ್ಯಾ ಆದಿ ಮಧ್ಯಾಂತಕೆ |
“ಮಾಸಾನಾಂ ಮಾರ್ಗಶೀರ್ಷೋಹಂ” ಎಂದು ಗೀತೆಯಲಿ
ಆ ಸ್ವಾಮಿ ದಿವ್ಯನುಡಿಯುಂಟು ಕೇಳ್ ಧರ್ಮಜನೆ |
ಸ್ತ್ರೀಸಹಿತ ಅನುಜರೊಡನೇ ಈ ವ್ರತವನು |
ಮೇಶನಾಜ್ಞೆಯಿದೆಂದು ಮಾಡಲು ನಿನಗೆ ರಾಜ್ಯ |
ಕೋಶ ಭಾಂಡಾರಪ್ರಾಪ್ತಿಯಾಗುವದು |
ಲೇಶ ಸಂಶಯ ಬ್ಯಾಡೆನಲು ಶ್ರೀ ವ್ಯಾಸ |
ಆ ಸುಂದರ ವಿಠಲನ ಭಕುತರು ಮುದಭರಿತರಾಗೆ ೮
ರೂಪತಾಳ
ರವಿಯು ವೃಶ್ಚಿಕ ರಾಶಿಗೆ ಬರಲಾಗಿ |
ಸವೆಯಾದ ಪದವೀವ ವ್ರತವಮಾಡುವದಕ್ಕೆ |
ಕವಳಾ ಅಜ್ಞಾನಾಖ್ಯ ರಾತ್ರಿಕಳೆದು |
ಸುವಿಮಲಾಜ್ಞಾನಾಖ್ಯ ಪ್ರಾತಃ ಕಾಲದಲೆದ್ದು |
ಕವಿವ್ಯಾಸರ ಮುಂದೆ ಮಾಡಿ ಧರ್ಮಜನು |
ಸುವಿವೇಕಬುದ್ಧಿಯಿಂ ಸ್ನಾನಾದಿಗಳ ಮಾಡಿ |
ಹವಿಷಾದಿ ದ್ರವ್ಯಗಳಲಿ ಹರಿಯಚಿಂತಿಸಿ ಮಾ |
ಧವನಾಜ್ಞೆಯಂತೆ ಉದ್ಯಾಪನವಂಗೈದು |
ಕವ್ಯವಾಹನನಲ್ಲಿ ಮೂಲಮಂತ್ರದಿಂದ |
ಲವಕಾಲ ಬಿಡದಲೆ ವೇದಸೂಕ್ತಗಳಿಂ ಹೋಮಿಸಿ |
ನವಭಕುತಿಯಲಿ ಹನುಮಂತನ ವ್ರತಾಚರಿಸಲು |
ಹವಣಿಸಿ ಸಂವತ್ಸರವು ಪೋಗಲು ಪಾಂಡವರು |
ಬವರದಲ್ಲಿ ಕೌರವರಗೆ