|
ಯಾವುದೇ ಒಂದು ದೇಶದ ಅಭಿವೃದ್ಧಿ ಎಂದರೆ ಅಲ್ಲಿನ ದುರ್ಬಲ ವರ್ಗದವರನ್ನು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಮೇಲೆತ್ತುವುದೇ ಆಗಿದೆ. ಹಾಗೆಯೇ ಪ್ರತಿಯೊಬ್ಬ ಪ್ರಜೆಯ ಪ್ರಗತಿಯಿಂದಲೂ ಒಂದು ದೇಶವು ಮುಂದುವರಿದ ದೇಶವೆಂದು ಪರಿಗಣಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಭಾರತ ಸರ್ಕಾರವು ಮೊದಲಿನಿಂದಲೂ ಶ್ರಮಿಸುತ್ತಾ ಬಂದಿದೆ. ಇದಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಮಾಜ ಕಲ್ಯಾಣ ಯೋಜನೆಗಳ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಪ್ರಯತ್ನಿಸುತ್ತಿವೆ. ಇದೇ ರೀತಿ ರಾಜ್ಯದ ಜನತೆಯ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸ್ಥಾನಮಾನದಲ್ಲಿ ಸಮಾನತೆಯನ್ನು ಸ್ಥಾಪಿಸುವುದು ಕರ್ನಾಟಕ ಸರ್ಕಾರದ ಮುಖ್ಯ ಧ್ಯೇಯವಾಗಿದೆ. ದಲಿತರು, ಹಿಂದುಳಿದವರು, |