Loading Events

« All Events

ಡಾ. ವಾಮನದತ್ತಾತ್ರೇಯ ಬೇಂದ್ರೆ

July 28

೨೮-೭-೧೯೩೫ ಅತ್ಯುತ್ತಮ ಪ್ರಾಧ್ಯಾಪಕರು, ಸಾಹಿತಿಗಳು ಆದ ವಾಮನ ಬೇಂದ್ರೆಯವರು ಹುಟ್ಟಿದ್ದು ಹಾವೇರಿ ಜಿಲ್ಲೆಯ ರಾಣಿ ಬೆನ್ನೂರಿನಲ್ಲಿ. ತಂದೆ ವರಕವಿ ದ.ರಾ.ಬೇಂದ್ರೆ, ತಾಯಿ ಲಕ್ಷ್ಮೀಬಾಯಿ. ಪ್ರಾರಂಭಿಕ ಶಿಕ್ಷಣ ಗದಗ. ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ. ಮತ್ತು ಎಂ.ಎ. ಪದವಿ. ಪುಣೆ ವಿಶ್ವವಿದ್ಯಾಲಯಕ್ಕೆ ‘ಲಕ್ಷ್ಮೀಶನ ಜೈಮಿನಿ ಭಾರತ ; ಒಂದು ಅಧ್ಯಯನ ’ ಮಹಾಪ್ರಬಂಧ ಮಂಡಿಸಿ ಪಿಎಚ್.ಡಿ. ಪದವಿ. ಸಾಂಗ್ಲಿಯ ವೆಲ್ಲಿಂಗ್‌ಡನ್ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಉದ್ಯೋಗ ಪ್ರಾರಂಭ. ನಂತರ ವಿದ್ಯಾರಣ್ಯ ಕಿರಿಯ ಕಾಲೇಜ್ ಧಾರವಾಡದಲ್ಲಿ ಉಪನ್ಯಾಸಕರಾಗಿ, ಕಿಟಲ್ ಕಲಾ ಕಾಲೇಜ್ ಧಾರವಾಡದಲ್ಲಿ ಪ್ರಾಧ್ಯಾಪಕರಾಗಿ, ಕನ್ನಡ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿ ನಿವೃತ್ತಿ. ಸಾಹಿತ್ಯ ರಚನೆ ತಂದೆಯಿಂದ ಬಂದ ಬಳುವಳಿ. ಶಾಲೆಯಲ್ಲಿದ್ದಾಗಲೇ ಬರವಣಿಗೆ ಪ್ರಾರಂಭ. ಇಂಟರ್ ಮೀಡಿಯೆಟ್ ಓದುತ್ತಿದ್ದಾಗಲೇ ಪ್ರಬಂಧ, ನಾಟಕ ರಚನೆಯಲ್ಲಿ ಪಡೆದ ಸಮರ್ಥತೆ. ಕನ್ನಡ, ಮರಾಠಿ, ಇಂಗ್ಲಿಷ್, ಹಿಂದಿಭಾಷೆಗಳ ಮೇಲಣ ಪ್ರಭುತ್ವ. ಸಂಗೀತ, ನಾಟಕ, ಭಾಷಣ ಹವ್ಯಾಸಗಳು. ಮೊದಲ ಕವನ ಸಂಕಲನ ಅನಂತಧಾರೆ, ನಂತರ ಸ್ಪಂದನ ಪ್ರಕಟಿತ. ನಾಟಕಗಳು-ಸೊಂಡಿಲ ಗಣಪ್ಪ ಬಂದ, ಸ್ಪರ್ಶ ಹಾಗೂ ಇತರ ನಾಟಕಗಳ ಸೇರಿ ಮೂವತ್ತಕ್ಕೂ ಹೆಚ್ಚು ರೇಡಿಯೋ ನಾಟಕಗಳ ರಚನೆ. ವಿಮರ್ಶೆ-ಕಥನ ಕುಶಲಕವಿ ಲಕ್ಷ್ಮೀಶ, ಲಕ್ಷ್ಮೀಶ ಕವಿ-ಕಾವ್ಯ ಪರಂಪರೆ, ಲಕ್ಷ್ಮೀಶ : ಒಂದು ಅಧ್ಯಯನ, ಬೇಂದ್ರೆ ಕಾವ್ಯಲೋಕ, ಬೇಂದ್ರೆ ಬೆಳಕು, ಕವಿಚೂತವನ ಚೈತ್ರ ಲಕ್ಷ್ಮೀಶ. ಜೀವನಚರಿತ್ರೆ- ದ.ರಾ.ಬೇಂದ್ರೆ ಜೀವನ ಪರಿಚಯ. ಸಂಪಾದಿತ ಕೃತಿಗಳು-ಕುಣಿಯೋಣ ಬಾರ, ಅಂಬಿಕಾತನಯ ಹಾಡs ಬೆಳದಿಂಗಳ ನೋಡs, ನೋಡ್ಯಾನs ದಶಾವತಾರ, ಅಂಬಿಕಾತನಯ ಹಾಡ್ಯಾನs, ಕನ್ನಡಕ್ಕೆ ಕಿಟೆಲ್ ಕೊಡುಗೆ, ನಾಳಿನ ಕನಸು, ಚೈತನ್ಯದ ಪೂಜೆ, ನಮನ, ದರ್ಶನ, ವಿಕಾಸ, ವಿನ್ಯಾಸ, ತತ್ತ್ವ, ಸಿದ್ಧಾಂತ, ಬೇಂದ್ರೆ ಋತುದರ್ಶನ, ಬೇಂದ್ರೆ ಸಮಗ್ರ ಕಾವ್ಯ ಸಂಪುಟ, ಬೇಂದ್ರೆಯವರ ಜೀವನ ಮಹಾಕಾವ್ಯ ‘ಔದುಂಬರ ಗಾಥೆ’. ಭಾಷಾಂತರಗಳು-ಗುರುಗೋವಿಂದ ಸಿಂಗ, ಭಾರತೀಯ ಸಾಹಿತ್ಯ ಸಂಕಲನ, ಕಾಲಾಯ ತಸ್ಮೈನಮಃ, ಜಾನಪದ ಸಾಹಿತ್ಯ, ಸಮರ್ಥ ರಾಮದಾಸ ಹಾಗೂ ಸ್ವಾಮಿ ವಿವೇಕಾನಂದ, ಬೇಂದ್ರೆಯವರ ಕವನಗಳನ್ನು ಇಂಗ್ಲಿಷ್‌ಗೆ ಭಾಷಾಂತರ ಮುಂತಾದುವು. ಅರಸಿ ಬಂದ ಪ್ರಶಸ್ತಿ ಗೌರವಗಳು-ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ, ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ, ವಿದ್ಯಾರಣ್ಯ ಪ್ರಶಸ್ತಿ, ಧಾರವಾಡ ಜಿಲ್ಲಾ ಸಾಹಿತ್ಯ ಸಮ್ಮೇಳನ ಪ್ರಶಸ್ತಿ, ಪರಶುರಾಮ ಪ್ರಶಸ್ತಿ, ಕನ್ನಡ-ಮರಾಠಿ ಭಾಷಾ ಬಾಂಧವ್ಯ ಪ್ರಶಸ್ತಿ, ಶ್ರೀವರದರಾಜ ಆದ್ಯ ಸಾಹಿತ್ಯ ಪ್ರಶಸ್ತಿ ಮುಖ್ಯವಾದುವುಗಳು.   ಇದೇ ದಿನ ಹುಟ್ಟಿದ ಸಾಹಿತಿಗಳು : ಕುಮಾರ ಕಕ್ಕಯ್ಯ ಪೋಳ್ – ೧೯೨೯ ಎಚ್.ವಿ. ಶ್ರೀನಿವಾಸ ಶರ್ಮ – ೧೯೩೨ ವರದಾ ಶ್ರೀನಿವಾಸ – ೧೯೫೦

Details

Date:
July 28
Event Category: